LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಇಂದು ತುಮಕೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಗುರುವಂದನಾ ಮಹೋತ್ಸವದಲ್ಲಿ ಭಾಗಿ

Advertisement

ತುಮಕೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 1ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಲಿಂ. ಡಾ.ಶ್ರೀ. ಶಿವಕುಮಾರ ಮಹಾ ಸ್ವಾಮೀಜಿಯವರ 119ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ಏಪ್ರಿಲ್ 1ರಂದು ಬುಧವಾರ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.


ಶ್ರೀಮಠದ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.


ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ಈ ಹಿಂದೆ ಶ್ರೀಗಳ ಜನ್ಮದಿನ ಮತ್ತು ಗುರುವಂದನಾ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಈಗ ಎರಡನೇ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ರೀ ಮಠಕ್ಕೆ ಆಗಮಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.


ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12:30ರೊಳಗೆ ಮುಗಿಯಲಿದೆ. ಕೇಂದ್ರ ಸಚಿವರು, ರಾಜ್ಯದ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಬೆಳಗಿನ ಜಾವ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ