ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ನ್ಯಾಯಮೂರ್ತಿ ರಾಜೇಶ್ವರಿ ನಾರಾಯಣ ಹೆಗ್ಡೆ, ನ್ಯಾಯಮೂರ್ತಿ ಕೆದಂಬಾಡಿ ಗಣೇಶ್ ಶಾಂತಿ ಹಾಗೂ ನ್ಯಾಯಮೂರ್ತಿ ಬೃಂಗೇಶ್ ಮಹಾದೇವಪ್ಪ ಅವರ ನೇಮಕಗೊಳಿಸಿ ರಾಷ್ಟ್ರಪತಿಗಳು ಆದೇಶಿಸಿದ್ದಾರೆ.
ಇದುವರೆಗೆ ಹಿರಿಯ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.

