LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಾಲೂಕ ಪಂಚಾಯತ್ ಸಭಾಭವನದಲ್ಲಿ  ಪ್ರಗತಿ ಪರಿಶೀಲನಾ ಸಭೆ

Advertisement
ಬೆಳಗಾವಿ :ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಸೋಮವಾರ ನಡೆದ 2025 26 ನೇ ಸಾಲಿನ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯಲ್ಲಿ ಕಾರ್ಮಿಕ ಇಲಾಖೆ ನಿರೀಕ್ಷಕ ತನ್ನ ಇಲಾಖೆಯ ವರದಿ ವಾಚಿಸುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಶಾಸಕ ಪಟ್ಟಣ ಕೆಲಸದ ವೇಳೆಯಲ್ಲಿ ಇಲಾಖೆಯಲ್ಲಿ ಲಭ್ಯವಿರದೆ ಏಜೆಂಟ್ ಮೂಲಕ ಕೆಲಸ ನಿರ್ವಹಿಸುವ ಕುರಿತು ದೂರುಗಳು ಕೇಳಿ ಬಂದಿವೆ ಸ್ವತಃ ನಾನೇ ಹಲವು ಬಾರಿ ಕಚೇರಿಗೆ ಬಂದರು ಕೈಗೆ ಸಿಗುತ್ತಿಲ್ಲ ನಿಮ್ಮ ನಡೆಯಲ್ಲಿ ಬದಲಾವಣೆ ಕಾಣದೆ ಇದೇ ರೀತಿ ಮುಂದುವರೆದಲ್ಲಿ ಭ್ರಷ್ಟಾಚಾರ ಆರೋಪ ದಡಿಯಲ್ಲಿ ನಿಮ್ಮನ್ನು ಮನೆಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

40 ವರ್ಷಗಳಿಂದ ಅರಣ್ಯ ಇಲಾಖೆಯ ಭೂಮಿಯಲ್ಲಿ ಮನೆ ಮಾಡಿಕೊಂಡಿರುವ ಜನತೆಯನ್ನು ತೆರೆವುಗೊಳಿಸಬೇಡಿ ಅವುಗಳನ್ನು ಅವರಿಗೆ ಸಕ್ರಮಗೊಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಅಂತಹ ಜನತೆಗೆ ಶಾಶ್ವತ ಪರಿಹಾರ ಕಲ್ಪಿಸಲು ಶ್ರಮಿಸುತ್ತೇನೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಂತಹ ನಾಗರಿಕರಿಗೆ ತೊಂದರೆ ಕೊಡಬಾರದು ಎಂದು ಸೂಚನೆ ನೀಡಿದರು.



ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಅನ್ಯೋನ್ಯತೆಯಿಂದ ವರ್ತಿಸಿ ಪರಿಸ್ಥಿತಿ ತಿಳಿಗೊಳಿಸಬೇಕು ಎಂದ ಅವರು ತಶೀಲ್ದಾರ್ ಕಾರ್ಯಾಲಯದಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ ಸಾರ್ವಜನಿಕರನ್ನು ಸತಾಯಿಸದೆ ಕೆಲಸ ಕಾರ್ಯ ನಿರ್ವಹಿಸುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ಪ್ರಕಾಶ್ ಹೊಳೆಪಗೋಳ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಹಾಗೂ ರಾಮ್ದುರ್ಗ ತಾಲೂಕ ಪಂಚಾಯತ್ ಆಡಳಿತ ಅಧಿಕಾರಿ ಚೇತನ್ ಕುಮಾರ್ ತಹಸೀಲ್ದಾರದ ಪ್ರಕಾಶ್ ಹೊಳೆಪ್ಪಗೋಳ ತಾಲೂಕು ಪಂಚಾಯತ್ ಬಸವರಾಜ್ ಐನಾಪುರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ: ಮಂಜುನಾಥ ಕಲಾದಾಗಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ