LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಾಲೂಕಿನ ವಿವಿಧ ಗ್ರಾಮಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ

Advertisement
ಮಾನ್ವಿ : ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕಿನ ವಿವಿಧ ಗ್ರಾಮಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾ.ಪಂ. ಇ.ಓ. ಖಾಲೀದ್ ಅಹಮ್ಮದ್ ಮಾತನಾಡಿ ತಾಲೂಕಿನ ಎಲ್ಲಾ ೧೭ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಕೂಲಿ ಕಾರ್ಮಿಕರಿಂದ ನಮೂನೆ-೦೬ರಲ್ಲಿ ಅರ್ಜಿ ಸ್ವೀಕರಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೇಲಸ ನೀಡಬೇಕು ಹಾಗೂ ಕೇಲಸದ ಸ್ಥಳದಲ್ಲಿ ಪ್ರತಿದಿನ ಎರಡು ಬಾರಿ ಎನ್.ಎಂ.ಎA.ಎಸ್ ಹಾಜರಾತಿಯನ್ನು ಕಡ್ಡಾಯವಾಗಿ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಮೂಲಕ ಪಡೆಯಬೇಕು ಹಾಗೂ ಕೂಲಿ ಕಾರ್ಮಿಕರಿಗೆ ಅಗತ್ಯವಾದ ಕುಡಿಯುವ ನೀರಿನ ವ್ಯವಸ್ಥೆ,ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಇಲ್ಲದೆ ಇರುವ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮೇ ೩೧ ರವರಿಗೆ ಅವಕಾಶ ಮಾಡಿಕೊಡಲಾಗಿತ್ತು ಎಷ್ಟು ವಸತಿ ರಹಿತ ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಲಾಗಿರುವ ಬಗ್ಗೆ ಸರ್ವೆ ನಡೆಸಿರುವ ಕುರಿತು ಮಾಹಿತಿ ಪಡೆದರು. ಗ್ರಾಮ ಪಂಚಾಯಿತಿ ವತಿಯಿಂದ ೨೦೨೫-೨೬ ನೇ ಸಾಲಿನ ಬೇಡಿಕೆಗೆ ಅನುಗುಣವಾಗಿ ಕರ ವಸೂಲಿ ಮಾಡಿರುವಬಗ್ಗೆ ಕರ ವಸುಲಿಗಾರರಿಂದ ಮಾಹಿತಿ ಪಡೆದರು
ಸಭೆಯಲ್ಲಿ ತಾ.ಪಂ. ಸಹಾಯಕ ನಿರ್ದೇಶಕರಾದ ದೀಪ ಅರಳಿಕಟ್ಟಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ.ಗ್ರೇಡ್ -೧ ಹಾಗೂ ಗ್ರೇಡ್ -೨ ಕಾರ್ಯದರ್ಶಿಗಳು, ಗ್ರಾಮ ಪಂಚಾಯತಿ ದರ್ಜೆ ಲೆಕ್ಕ ಸಹಾಯಕರು, ನರೇಗಾ ಸಿಬ್ಬಂದಿಗಳು, ತಾಂತ್ರಿಕ ಸಹಾಯಕರು, ಡಿ .ಇ .ಓ, ಕರ ವಸೂಲಿಗಾರರು ಸೇರಿದಂತೆ ಇನ್ನಿತರ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಹಾಜರಿದ್ದರು, 27-ಮಾನ್ವಿ-02:
ಮಾನ್ವಿ:ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ.ಪಂ. ಇ.ಓ. ಖಾಲೀದ್ ಅಹಮ್ಮದ್ ನೇತೃತ್ವದಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ