Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೆಕೋಡಿ ಗ್ರಾಮದ ಸರಕಾರಿ ಕನ್ನಡ ಶಾಲೆಯ ಜಾಗೆಯ ದುರ್ಬಳಕೆ ಕುರಿತು ಕರವೇಯಿಂದ ಪ್ರತಿಭಟನೆ ಮತ್ತು ಮನವಿ ಸಲ್ಲಿಕೆ

Advertisement

ಚಿಕ್ಕೋಡಿ : ತಾಲೂಕಿನ  ಹಿರೆಕೋಡಿ ಗ್ರಾಮದಲ್ಲಿ ಕನ್ನಡ ಸರಕಾರಿ ಶಾಲೆಯು ಕಳೆದ ಶತಮಾನಗಳಿಂದ ಅಚ್ಚು ಕಟ್ಟಾಗಿ ತನ್ನ ಕಾರ್ಯವನ್ನು ಮಾಡುತ್ತ ಬಂದಿದೆ, ಈ ಶಾಲೆಯು ಜನರಿಂದ ದಾನ ಪಡೆದ ಜಾಗೆಯನ್ನು ಹೊಂದಿದ್ದು, ಶಾಲೆಯ ಜಾಗೆಯನ್ನು ಕಬಳಿಸುವ ಕುತಂತ್ರ ನಡೆದಿದೆ, ಗ್ರಾಮದ ನಾಗರಿಕರ ಹಾಗೂ ಕರವೇ ಕಾರ್ಯಕರ್ತರ ವಿರೋಧದ ನಡುವೆಯೂ ಶಾಲೆಯ ಜಾಗೆಯನ್ನು ಅತಿಕ್ರಮಿಸಿ ರಸ್ತೆ ಮಾಡುತ್ತಿದ್ದಾರೆ, ಇದನ್ನು ಖಂಡಿಸಿ ಕರವೇ ಸೇನಾನಿಗಳು ಹಾಗೂ ಹಿರೆಕೋಡಿ ಗ್ರಾಮಸ್ಥರು, ಚಿಕ್ಕೋಡಿ ತಹಶಿಲ್ದಾರರ ಕಚೇರಿಯ ಎದುರಿಗೆ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಕನ್ನಡ ಶಾಲಡಗಳನ್ನು ಉಳಿಸಿ ಬೆಳೆಸುವುದರಲ್ಲಿ ಆಸಕ್ತಿ ಇಲ್ಲ, ರಾಜ್ಯದಲ್ಲಿ ಎಷ್ಟೋ ಸರಕಾರಿ ಕನ್ನಡ ಶಾಲೆಗಳು ಮುಚ್ಚಿ ಜೋಗಿವೆ, ಅಲ್ಲಲ್ಲಿ ಉಳಿದಿರುವ ಕೆಲವು ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಇದೆ, ಹಿರೆಕೋಡಿ ಸರಕಾರಿ ಕನ್ನಡ ಸರಕಾರಿ ಶಾಲೆಯ ಜಾಗೆಯಲ್ಲಿ ರಸ್ತೆ ನಿರ್ಮಿಸಿ ಖಾಸಗಿಯವರಿಗೆ ಮನೆ ಹಾಕುತ್ತಿರುವುದು ಖಂಡನೀಯ, ನಾವು ನಮ್ಮ ಭಾಗದ ಸರಕಾರಿ ಕನ್ನಡ ಶಾಲೆಗಳ ಹಾಗೂ ಅದರ ಆಸ್ತಿಗಳ ಅಳಿವಿಗಾಗಿ ಬಿಡುವುದಿಲ್ಲ, ಬೇರೆಡೆಗೆ ರಸ್ತೆ ನಿರ್ಮಿಸುವ ಮೂಲಕ ಈಗ ನಡೆಯುತ್ತಿರುವ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ಈಗಿನ ಕಾಲದಲ್ಲಿ ಬಡವರ ಶಾಲೆಗೆ ಜನರು ದಾನವಾಗಿ ನೀಡಿರುವ ಭೂಮಿಯನ್ನೂ ಬಿಡುತ್ತಿಲ್ಲ, ತಮ್ಮ ಸ್ವಾರ್ಥಕ್ಕಾಗಿ ಶಾಲೆಯ ಭೂಮಿಯಲ್ಲಿ ರಸ್ತೆ ನಿರ್ಮಿಸುವುದು ಎಷ್ಟೊಂದು ಸಮಂಜಸ ಎಂಬುದನ್ನು ಜನಪ್ರತಿನಿಧಿಗಳು ವಿಚಾರ ಮಾಡಬೇಕು, ಈ ಪ್ರಕಾರ ಶಾಲೆಯ ಆವರಣದಲ್ಲಿ ರಸ್ತೆ ನಿರ್ಮಿಸುವ ಮೂಲಕ ಅಭಿವೃದ್ಧಿ ತೋರಿಸುವ ಜನಪ್ರತಿನಿಧಿಗಳ ನಿರ್ಧಾರದಿಂದ, ಮುಂದಿನ ಪೀಳಿಗೆಗೆ ಸರಕಾರಿ ಶಾಲೆಗಳ ಆಸ್ತಿ ಉಳಿಯಬಹುದಾ ? ಎಂಬುದು ಯಕ್ಷ ಪ್ರಶ್ನೆಯಾಗಿದೆ, ಸರಕಾರಿ ಶಾಲೆಗಳ ಆಸ್ತಿಗಳಲ್ಲಿ ಬೆಳವಣಿಗೆ ಆಗಬೇಕು ಹೊರತಾಗಿ ಕಡಿಮೆಯಾಗಬಾರದು, ಒಂದು ವೇಳೆ ಹೀಗೆಯೇ ಮುಂದೆವರೆದರೆ ಸರಕಾರಿ ಕನ್ನಡ ಶಾಲೆಗಳನ್ನು ಹುಡುಕುವ ಸ್ಥಿತಿ ಎದುರಾಗಲಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಸುಭಾಷ್ ಬಾಳಿಕಾಯಿ, ರಾಜೇಂದ್ರ ಕಾಂಬಳೆ, ರಜನಿಕಾಂತ ಬಡಿಗೇರ, ಮೊಷಿನ ಪಟೇಲ,ರಶೀದ ಮಕಾನದಾರ, ರಫೀಕ್ ಪಠಾಣ, ರಮೇಶ ಡಂಗೇರ, ಅಮೂಲ ನಾವಿ, ಪಾರೀಶ ಬಾಳಿಕಾಯಿ, ಶಂಕರ ಚೌಗಲಾ, ಚಿದಾನಂದ ಚೌಗಲಾ, ಸಾತ್ವಿರ ಕಟ್ಟಿ, ಸುರೇಶ ಪೂಜಾರಿ, ಅಣ್ಣಪ್ಪ ಪೂಜಾರಿ, ಸಾಗರ ನಿಂಗಾಗೋಳ, ಸುರೇಶ ಫರಿತೆ, ಚನ್ನಪ್ಪ ಮಂಟೂರ ಸೇರಿದಂತೆ ಹಲವಾರು ಕನ್ನಡ ಶಾಲಾ ಪ್ರೇಮಿಗಳು ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ