Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಲವು ಹಳ್ಳಿಗಳಿಗೆ ಬಸ್ ಸಂಚಾರ ಪ್ರಾರಂಭ ಮಾಡುವಂತೆ ಕರವೇ ವತಿಯಿಂದ ಪ್ರತಿಭಟನೆ.

Advertisement
ಸೇಡಂ:- ತಾಲೂಕಿನ ರಂಜೋಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲ ಎಂದು ಇಂದು ಸೇಡಂ ಬಸ್ ಘಟಕದ ಎದುರುಗಡೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿದರು.

ಚಿಟಕನಪಲ್ಲಿ, ಜಾಕನಪಲ್ಲಿ, ಇಮಾಡಪುರ, ಸಿಂದನಮಾಡು, ಹಣಮನಹಳ್ಳಿ, ಮಾಧವಾರ, ಹಳ್ಳಿಗಳಿಂದ ರಂಜೋಳ ಶಾಲೆಗೆ ಬರಲು ತುಂಬಾ ತೊಂದರೆಯಾಗುತ್ತದೆ. ಶಾಲೆ ಮಕ್ಕಳು ಶಿಕ್ಷಕರು ತಮ್ಮಮನೆಗಳಿಗೆ ಸೇರಲು ಸಾಯಂಕಾಲ 7 ರಿಂದ 8 ಗಂಟೆಯಾಗುತ್ತದೇ ಅದ ಕಾರಣ ರಂಜೋಳ ಗ್ರಾಮಕ್ಕೆ ಬಸ್ ಇದೆ ಸ್ವಲ್ಪ ಸಮಯ ಬದಲಾವಣೆ ಮಾಡಲು ನಿರಂತರ ಗ್ರಾಮಪಂಚಾಯಿತಿ ವತಿಯಿಂದ ಸಾಕಷ್ಟು ಬಾರಿ ಮನವಿ ಮಾಡಿದರು ಘಟಕ ವ್ಯವಸ್ಥಾಪಕರು ಸ್ಪಂದಿಸದ ಕಾರಣ ಇಂದು ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್ ಅವರು ಈ ಸಂದರ್ಭದಲ್ಲಿ ಮಾತನಾಡಿದರು.

ತದನಂತರ ಸೇಡಂ ಬಸ್ ಘಟಕ ವ್ಯವಸ್ಥಾಪಕರಾದ ಬಿ ವೈ ವಾಟ್ಕರ್ ಅವರು ಬಂದು ಮನವಿ ಸ್ವೀಕರಿಸಿ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವೆ ಎಂದು ಭರವಸೆ ನೀಡಿದ ನಂತರ ಹೋರಾಟವನ್ನು ನಿಲ್ಲಿಸಿದರು.ಇದೇ ಸಂದರ್ಭದಲ್ಲಿ ಎರಡು ಮೂರು ದಿನಗಳ ಒಳಗೆ ಈ ಸಮಸ್ಯೆಯನ್ನು ಬಗೆಹರಿಸದಿದ್ದಾರೆ ಕನ್ನಡ ಸೈನಿಕರ ವತಿಯಿಂದ ಉಗ್ರಾ ಹೋರಾಟ ಮಾಡಲಾಗುತ್ತದೆ ಎಂದು ಗುತ್ತೇದಾರ್ ಎಚ್ಚರಿಕೆಯ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ತಾಲೂಕ ಅಧ್ಯಕ್ಷರಾದ ಡಾ. ರಾಮಚಂದ್ರ ಗುತ್ತೇದಾರ್, ಚಂದ್ರಶೇಖರ್ ಪೂಜಾರಿ, ದೇವು ನಾಟಿಕರ್, ಗುಂಡಪ್ಪ ಪೂಜಾರಿ, ರವಿಸಿಂಗ್ ಠಾಕೂರ್, ಭೀಮಾಶಂಕರ ನಾಟಿಕರ್, ಚಂದ್ರಶೇಖರ್ ಮಡಿವಾಳ, ಭಗವಂತು, ಆನಂದ್, ಅಮೃತಯ್ಯ, ಶ್ರೀನಿವಾಸ್ ರೆಡ್ಡಿ, ಮಹೇಶ್, ಶರಣಪ್ಪ, ಜಯಪ್ಪ, ಭರತ್, ಶ್ರೀಕಾಂತ್, ಅಭಿ, ಮಹೇಶ್ ನಾಟಿಕರ್, ದಿನೇಶ್, ಲಚಮಪ್ಪ, ಮಹೇಶ್, ಅನಿಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ