Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕ ವರ್ಗಾವಣೆ ರದ್ದು ಪಡಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ

Advertisement
ಚಿಟಗುಪ್ಪ: ತಾಲ್ಲೂಕಿನ ಬಸೀರಾಪೂರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ, ನಾಗಪ್ಪ ಕರಕನ್ನಳ್ಳಿ ಅವರ ವರ್ಗಾವಣೆ ರದ್ದು ಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಎಂದಿನಂತೆ ಶಾಲಾ ಮೈದಾನದಲ್ಲಿ ಪ್ರಾರ್ಥನೆ ಮಾಡಿದ್ದ 1ರಿಂದ 8ನೇ ತರಗತಿಯ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಕೊಠಡಿಯೊಳಗೆ ಕುಳಿತುಕೊಳ್ಳದೆ ಮತ್ತು ಶಿಕ್ಷಕರನ್ನು ಒಳಗಡೆ ಇರಲು ಬಿಡದೆ ಎಲ್ಲಾ ಶಿಕ್ಷಕರಿಗೆ ಹೊರಗಡೆ ಕಳಿಸಿ ಕೊಠಡಿಗಳಿಗೆ ಬೀಗ ಹಾಕಿದ್ದಾರೆ.

ತರಗತಿ ಬಹಿಷ್ಕರಿಸಿ ಕಾಂಪೌಂಡ್ ಹೊರಗೆ ಬಂದ ವಿದ್ಯಾರ್ಥಿಗಳು ಶಾಲಾ ಗೇಟ್‌ಗೆ ಬೀಗಹಾಕಿ ಎದರುಗಡೆ ಇರುವ ರಸ್ತೆ ಮೇಲೆ ಕುಳಿತು ಯಾವುದೇ ಕಾರಣಕ್ಕೂ ನಮ್ಮ ನೆಚ್ಚಿನ ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರನ್ನು ಬೇರೆಡೆ ವರ್ಗಾವಣೆ ಮಾಡಬಾರದು.ಅವರ ವರ್ಗಾವಣೆ ಆದೇಶವನ್ನು ಈ ಕೂಡಲೇ ರದ್ದುಗೊಳಿಸಬೇಕು. ಆದೇಶ ಹಿಂಪಡೆಯುವವರೆಗೂ ನಾವು ಒಳಗೆ ತರಗತಿಯಲ್ಲಿ ಕುಳಿತುಕೊಳ್ಳುವುದಿಲ್ಲ ವಿದ್ಯಾರ್ಥಿಗಳು ತಿಳಿಸಿದರು.

ಈ ಮಧ್ಯೆ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾಗ ಪ್ರತಿಭಟನೆ ನಿಲ್ಲಿಸಿ ಎಂದಿನಂತೆ ತರಗತಿಗೆ ಹಾಜರಾದರು.

ಕನ್ನಡ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಅವರು 25 ವರ್ಷ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸರ್ಕಾರ ನಿಯಮ ಅನುಸಾರ ಹೆಚ್ಚುವರಿ ಶಿಕ್ಷಕರಾಗಿ ಆಯ್ಕೆಯಾದ ಪ್ರಯುಕ್ತ ಸೆ.11ರಂದು ತಾಲ್ಲೂಕಿನ ಪೋಲಕಪಳ್ಳಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಕ ನಾಗಪ್ಪ ಕರಕನ್ನಳ್ಳಿ ಸರ್ಕಾರದ ನಿಯಮಾನುಸಾರ ವರ್ಗಾವಣೆ ಆಗಿದೆ.

ಆದರೆ ವಿದ್ಯಾರ್ಥಿಗಳು ನನ್ನ ಮೇಲೆ ಇಟ್ಟಿರುವ ಪ್ರೀತಿ,ವಿಶ್ವಾಸ,ನೋಡಿದರೆ ಇಲ್ಲಿಂದ ಕಾಲ್ಕಿತ್ತಲು ಮನಸ್ಸು ಒಪ್ಪುತ್ತಿಲ್ಲ ಎಂದು ನೋವಿನಿಂದ ಹೇಳಿದರು.

ಶಿಕ್ಷಕರ ವರ್ಗಾವಣೆ ಖಂಡಿಸಿ 15ರಂದು ಗ್ರಾಮಸ್ಥರಿಂದ ಶಾಲೆಯ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಿನಕೇರಾ ಗ್ರಾಮ ಪಂಚಾಯತ ಶ್ರೀಕಾಂತ ಪಾಟೀಲ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ