Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ

Advertisement
ಅಮಾಯಕ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲು ಕೆಲ್ಲಂಬಳ್ಳಿ ಸೋಮನಾಯಕ ಆಗ್ರಹ...

ಚಾಮರಾಜನಗರ:ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಸೇರಿದಂತೆ 5 ಮಂದಿ ಅಧಿಕಾರಿಗಳ  ಅಮಾನತು ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ನಾಯಕ ಜನಾಂಗದಿಂದ ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ವಾಲ್ಮೀಕಿ ನಾಯಕ ಸಮುದಾಯದ ಪ್ರಭಾವಿ ಮುಖಂಡರಾದ ಕೆಲ್ಲಂಬಳ್ಳಿ ಸೋಮನಾಯಕ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ,ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ಪ್ರಕರಣದ ನೇರ ಹೊಣೆಯನ್ನು ರಾಜ್ಯ ಸರ್ಕಾರ ಹೊತ್ತುಕೊಳ್ಳಬೇಕು. ಯಾವುದೇ ಮುನ್ಸೂಚನೆ ಇಲ್ಲದೆ ಪೊಲೀಸ್ ಅನುಮತಿ ಇಲ್ಲದೆ ಸ್ವಾರ್ಥಕ್ಕಾಗಿ ಸರ್ಕಾರ ತರಾತುರಿಯಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆ ಮಾಡಿದ್ದು, ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರನ್ನು ಬಲಿಪಡಿದಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾಕ್ಟರ್.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು.  ರಾಜ್ಯ ಸರ್ಕಾರ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಈ ಪ್ರಕರಣದಲ್ಲಿ ಅಮಾಯಕ ಪೊಲೀಸ್ ಅಧಿಕಾರಿಗಳ ಅಮಾನತು ಪಡಿಸಿರುವುದು ಸರಿಯಲ್ಲ. ಅಧಿಕಾರಿಗಳ ಅಮಾನತು ಆದೇಶವನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕೆಲ್ಲಂಬಳ್ಳಿ ಸೋಮನಾಯಕ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಶಿವರಾಜ್, ಯಜಮಾನ ರಾಜುನಾಯಕ, ಸಂತೋಷ್, ಬುಲೆಟ್ ಚಂದ್ರು, ಚೇತು, ರಂಗಸ್ವಾಮಿ, ಚಂದು, ಬಸವರಾಜು, ಸತೀಶ್, ರಾಜು, ಶಂಕರ್‌, ಸೋಮು, ಶಿವಮೂರ್ತಿ, ಇತರರು ಭಾಗವಹಿಸಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ