Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಣಶಿ ಗ್ರಾಮಸ್ಥರಿಂದ ರಸ್ತೆಗಾಗಿ ಪ್ರತಿಭಟನೆ ಎಚ್ಚರಿಕೆ

Advertisement
ಜೊಯಿಡಾ: ತಾಲೂಕಿನ ಅಣಶಿ ಸದಾಶಿವಗಡ ರಾಜ್ಯ ಹೆದ್ದಾರಿ ಸರಿಪಡಿಸುವುದು ಮತ್ತು ಗ್ರಾಮೀಣ ಭಾಗದಲ್ಲಿ ಅಳವಡಿಸಿದ ಬಿಎಸ್ಎನ್ಎಲ್ ಮೊಬೈಲ್ ಟವರ್ ಗಳಿಗೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಜನವರಿ 6 ರಂದು ಅಣಶಿ ಯಲ್ಲಿ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಸ್ಥಳಿಯರು ತಹಶಿಲ್ದಾರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ನುಜ್ಜಿಯಿಂದ ಬರಪಾಲಿ ತನಕ15 ಕಿ.ಮಿ ರಸ್ತೆ ಸಂಪೂರ್ಣ ಹೊಂಡಮಯವಾಗಿದೆ. ಶಾಲಾ ಮಕ್ಕಳು, ಜಿಲ್ಲಾ ಕೇಂದ್ರ ಕಾರವಾರಕ್ಕೆ ಹೋಗಲು ಮತ್ತು ಪ್ರವಾಸಿಗರಿಗೆ ತುಂಬಾ ತೊಂದರೆಯಾಗುತ್ತಿದೆ. ಗ್ರಾಮಿಣ ಭಾಗವಾದ ನುಜ್ಜಿ, ಬಾಡಪೋಲಿ, ಲಾಂಡೇ, ಶ್ರೀಪತಿ, ತೇರಾಳಿ, ಡಿಗ್ಗಿ ಹೀಗೆ ಅನೇಕ ಕಡೆ ಬಿಎಸ್ಎನ್ಎಲ್ ದಿಂದ ಟವರ್ ನಿರ್ಮಾಣ ಮಾಡಲಾಗಿದೆ. ಆದರೆ ಸಂಪರ್ಕ ವ್ಯವಸ್ಥೆ ಮಾಡಿಲ್ಲ, ಅಧಿಕಾರಿಗಳು ಸಬೂಬು ಹೇಳಿ ಕಾಲ ಕಳೆಯುತ್ತಿದ್ದಾರೆ.



ಜೊಯಿಡಾ ತಹಶಿಲ್ದಾರ ಮೂಲಕ ಅನೇಕ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅಣಶಿ ಕೇಂದ್ರದಲ್ಲಿ ಜನವರಿ 6 ರಂದು ಔರಾದ್ ಸದಾಶಿವಗಡ ರಾಜ್ಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಮನವಿಯನ್ನು ಪ್ರಮುಖರಾದ ದೀಪಕ ದೇಸಾಯಿ, ಕಿರಣ ಹರಿಜನ, ಮುರಲಿಧರ ದೇಸಾಯಿ, ಧೀರಜ್ ದೇಸಾಯಿ, ವಿನಂತಿ ದೇವಳಿ, ವಿನೋದ್ ದೇವಳಿ, ವಿಶ್ವನಾಥ್ ಹರಿಜನ, ಗಿತಾಂಜಲಿ ದೇಸಾಯಿ, ನರಹರಿ ದೇಸಾಯಿ, ಶ್ರೀಕಾಂತ್ ಹರಿಜನ, ಸಂಗೀತಾ ದೇಸಾಯಿ ಮುಂತಾದವರು ಇದ್ದರು..
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ