Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆ, ಅಹವಾಲು ಸ್ವೀಕಾರ ಸಭೆ

Advertisement
ಸಿರುಗುಪ್ಪ : ನಗರದ ಸಿ.ಡಿ.ಪಿ.ಓ ಕಛೇರಿಯ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಜರುಗಿತು.
ಲೋಕಾಯುಕ್ತ ವೃತ್ತ ನಿರೀಕ್ಷಕ ಸುರೇಶ್ ಬಾವಿಮನೆ ಅವರಿಗೆ ಸಾರ್ವಜನಿಕರಿಂದ ಕಂದಾಯ, ನಗರಸಭೆ, ಗ್ರಾಮ ಪಂಚಾಯಿತಿ, ನೀರಾವರಿ ಇಲಾಖೆ ಸೇರಿದಂತೆ ಒಟ್ಟು 09 ಅರ್ಜಿಗಳು ಸಲ್ಲಿಕೆಯಾದವು.

[video width="848" height="480" mp4="https://bharathvaibhav.com/wp-content/uploads/2025/06/WhatsApp-Video-2025-06-11-at-4.17.20-PM.mp4"][/video]

ಶೇಕ್ಷಾವಲಿ ತಂದೆ ಎರಿಸ್ವಾಮಿ ಅವರು ನಗರದ ಸರ್ವೆ ನಂಬರ್ 406 ಎ/2ನಲ್ಲಿ ಒತ್ತುವರಿಯಾದ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಜಮೀನನ್ನು ತೆರವುಗೊಳಿಸುವಂತೆ ಸಲ್ಲಿಸಿದ್ದು, ವಿಳಂಬವಾಗುತ್ತಿರುವ ಬಗ್ಗೆ ದೂರಿದರು.
ಹಾಜಿಸಾಬ್ ಅವರು ನಗರಸಭೆಯಲ್ಲಿ ಕರ್ತವ್ಯ ನಿರತ ಕರವಸೂಲಿಗಾರರ ಬದಲಾಗಿ ಖಾಸಗಿ ವ್ಯಕ್ತಿಗಳು ರಸೀದಿ ಹಾಕುತ್ತಿದ್ದು, ಸೂಕ್ತ ಕ್ರಮ ಜರುಗಿಸುವಂತೆ ದೂರು ನೀಡಿದರು.

[video width="848" height="480" mp4="https://bharathvaibhav.com/wp-content/uploads/2025/06/WhatsApp-Video-2025-06-11-at-4.17.20-PM-1.mp4"][/video]

ನಗರದಲ್ಲಿ ನೂತನವಾಗಿ ನಿರ್ಮಿತವಾಗಿ ಹಲವಾರು ವರ್ಷಗಳೇ ಕಳೆದರೂ ಉದ್ಘಾಟನೆಗೊಳ್ಳದ ತರಕಾರಿ ಮಾರುಕಟ್ಟೆ ಸಂಕೀರ್ಣಗಳು ಅನೈತಿಕ ಚಟುವಟಿಕೆಯ ತಾಣವಾಗಿದ್ದು, ಕೂಡಲೇ ಸಂಬಂದಿಸಿದ ಅಧಿಕಾರಿಗಳು ಅವುಗಳ ಸದುಪಯೋಗಕ್ಕೆ ಮುಂದಾಗಬೇಕೆಂದು ಕರ್ನಾಟಕ ರಕ್ಷಣಾ ಪಡೆಯಿಂದ ಅಹವಾಲು ಸಲ್ಲಿಸಲಾಯಿತು.
ತಮ್ಮ ತಂದೆ ಹೆಸರಿಗಿರುವ ಜಾಗವನ್ನು ಸಹೋದರರಿಗೆ ಹಂಚುವಂತೆ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ನಮ್ಮನ್ನು ಅಲೆದಾಡಿಸುತ್ತಿದ್ದಾರೆಂದು ಹಚ್ಚೊಳ್ಳಿಯ ನಾಗರಾಜ ತಳವಾರ್ ಯಾದವ್ ಅವರು ಪಿಡಿಓ ಅಧಿಕಾರಿ ಮೇಲೆ ದೂರಿದರು.

ನಗರದಿಂದ ಬಂಡ್ರಾಳ್ ಕ್ರಾಸ್‌ವರೆಗಿನ ಆದೋನಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಸಾಮಾಜಿಕ ಕಾರ್ಯಕರ್ತ ನರಸಪ್ಪ ಅಹವಾಲು ಸಲ್ಲಿಸಿದರು.
ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಲೋಕಾಯುಕ್ತ ವೃತ್ತ ನಿರೀಕ್ಷಕ ಸುರೇಶ್ ಬಾವಿಮನೆ ಅವರು ಸಾರ್ವಜನಿಕರು ತಮ್ಮ ಕಛೇರಿಗಳಿಗೆ ಬಂದಾಗ ಸಂಯಮದಿಂದ ವರ್ತಿಸಿ, ಅವರನ್ನು ಹೆಚ್ಚಾಗಿ ಅಲೆಯದಂತೆ ತಮ್ಮ ಮಟ್ಟದಲ್ಲೇ ಇತ್ಯರ್ಥಗೊಳಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಇದೇ ವೇಳೆ ತಹಶೀಲ್ದಾರ್ ಕೆ.ನರಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪವನ್‌ಕುಮಾರ್.ಎಸ್.ದಂಡಪ್ಪನವರ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ