Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಅಂಕಪಟ್ಟಿ ಸಲ್ಲಿಸಿ ನೌಕರಿ ಗಿಟ್ಟಿಸಿಕೊಂಡ ಇಬ್ಬರಿಗೆ ಜೈಲು ಶಿಕ್ಷೆ 

Advertisement
ವಿಜಯಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಟೆಂಡರ್ ಹುದ್ದೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ, ತಲಾ ನಾಲ್ಕು ಸಾವಿರ ರೂಪಾಯಿ ದಂಡ ವಿಧಿಸಿ ವಿಜಯಪುರದ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಶ್ರೀಶೈಲ ಚವಾಣ್ ಮತ್ತು ಗಂಗಪ್ಪ ನಾಯಕ ಎಂಬುವರು ಶಿಕ್ಷೆಗೆ ಒಳಗಾದವರು. 2013ರಲ್ಲಿ ಇಬ್ಬರೂ ತಮ್ಮ 7ನೇ ತರಗತಿಯ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಅದನ್ನೇ ನಿಜವೆಂದು ಕೆಎಸ್‌ಆರ್ಟಿಸಿ ಅಟೆಂಡರ್ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ದಾಖಲಾತಿ ಪರಿಶೀಲಿಸಿದಾಗ ಮಹದೇವ ಕಾಂಬಳೆ ಎಂಬುವರು ಅಂಕಪಟ್ಟಿಗಳು ಸರಿಯಾಗಿವೆ ಎಂದು ದೃಢೀಕರಿಸಿ ಪ್ರಮಾಣ ಪತ್ರ ನೀಡಿದ್ದರು. ಇಬ್ಬರೂ ಆರೋಪಿಗಳು ಮೂಲ ಅಂಕಪಟ್ಟಿಗಳು ಕಳೆದು ಹೋಗಿವೆ ಎಂದು ಸಾಕ್ಷ್ಯ ನಾಶಪಡಿಸಿದ್ದರು.

ಈ ಬಗ್ಗೆ ಸಂಸ್ಥೆಯ ವಿಭಾಗೀಯ ಕಚೇರಿಯ ಭದ್ರತಾ ಮತ್ತು ಜಾಗೃತ ಅಧಿಕಾರಿ ದುರ್ಗಪ್ಪ ಗುರಿಗಾರ 2013ರ ಡಿಸೆಂಬರ್ 26ರಂದು ಗೋಲಗುಮ್ಮಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅಂಬಲಿ ಇಬ್ಬರಿಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಅಭಿಯೋಜಕ ಎಲ್.ಎಂ. ಹಳ್ಳೂರ ವಾದ ಮಂಡಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ