Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೊಗರಿ ಖರೀದಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ:ಖಂಡ್ರೆ

Advertisement
ಚಿಟಗುಪ್ಪ:ರೈತರು ಬೆಂಬಲ ಬೆಲೆಯ ತೊಗರಿ ಖರೀದಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರಕುಮಾರ ಖಂಡ್ರೆ ಹೇಳಿದರು.

ತಾಲ್ಲೂಕಿನ ತಾಳಮಡುಗಿ ಗ್ರಾಮದಲ್ಲಿ ತೊಗರಿ ಖರೀದಿ ಕೇಂದ್ರವನ್ನ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಈ ಭಾಗದ ರೈತರ,ಸಾರ್ವಜನಿಕರ ಅನುಕೂಲಕ್ಕಾಗಿ ತೊಗರಿ ಖರೀದಿ ಕೇಂದ್ರ ತೆರೆಯಲಾಗಿದ್ದು ತಾಳಮಡುಗಿ ಮತ್ತು ಕಂದಗುಳ ಗ್ರಾಮದ ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ ಮಾತನಾಡಿ,ನೋಂದಣಿಯಾದ ಎಲ್ಲ ರೈತರ ತೊಗರಿಯನ್ನು ಖರೀದಿಸಲಾಗುತ್ತದೆ.ಇದರ ಅನುಕೂಲವನ್ನು ಪ್ರತಿ ರೈತರು ಪಡೆಯುವ ಮೂಲಕ ತೊಗರಿ ಖರೀದಿ ಕೇಂದ್ರದ ಕಾರ್ಯ ಯಶಸ್ವೀಗೊಳಿಸಬೇಕು ಎಂದು ಹೇಳಿದರು.

ತಾಪಂ ಮಾಜಿ ಸದಸ್ಯ ಶ್ರೀಮಂತ ಪಾಟೀಲ ಮಾತಾಡಿ,ಗೋಡಾಣ ಮತ್ತು ಔಷದಿ ಕೇಂದ್ರ ತಾಳಮಡುಗಿ ಗ್ರಾಮದಲ್ಲಿ ನಿರ್ಮಿಸಬೇಕು.ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಪಿಕೆಪಿಎಸ್ ಅಧ್ಯಕ್ಷ ಉಮೇಶ ಕುಲಕರ್ಣಿ ಮಾತನಾಡಿ,ತಾಳಮಡುಗಿ ಪಿಕೆಪಿಎಸ್ ಮೇಲೆ ಹೆಚ್ಚಿನ ಕಾಳಜಿ ವಹಿಸಿ ನಮ್ಮ ರೈತರ ಬೇಡಿಕೆಗಳನ್ನು ಪೂರೈಸಲು ತಾವುಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರ.

ಪಿಕೆಪಿಎಸ್ ಉಪಾಧ್ಯಕ್ಷ ರವಿ ಹಾವಶೆಟ್ಟಿ, ನಿರ್ದೇಶಕರಾದ ಮೆಹೇಬೂಬ ಖಾನ ಪಟೇಲ್,ಸೋಮಶೇಖರ ಧಡಿಮಾಳ,ಕೈಲಾಸ ಪಾವಡಶೆಟ್ಟಿ,ವಿಜಯಕುಮಾರ,ಕಸ್ತೂರಬಾಯಿ ಧಡಿಮಾಳ,ಚಂದ್ರಕಲಾಬಾಯಿ ಶೇರಿಕಾರ,ವೀರಶಟ್ಟಿ ನಿಂಬುರೆ,ಲಕ್ಷ್ಮಣ ಸೇಟ್ವಾಜಿ,ಪ್ರಮುಖರಾದ ಬಾಬುರಾವ ಪಾಟೀಲ, ಮಾಣಿಕಪ್ಪ ಹಾವಶೆಟ್ಟಿ,ಪಿಕೆಪಿಎಸ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ನಾಗನಕೇರಾ,ಪ್ರಹ್ಲಾದ ವಿಶ್ವಕರ್ಮ ಸೇರಿ ಪಿಕೆಪಿಎಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಜೀಶ ಲಂಬುನೋರ ಚಿಟಗುಪ್ಪ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ