Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಸಿಬಿ ಆಟಗಾರ ಮೆರವಣಿಗೆ ಇಲ್ಲ : ಜಿ. ಪರಮೇಶ್ವರ್ 

Advertisement
ಬೆಂಗಳೂರು : ಚೊಚ್ಚಲ ಐಪಿಎಲ್ ಗೆದ್ದ ಆರ್ಸಿಬಿ ತಂಡ ಬೆಂಗಳೂರಿಗೆ ಆಗಮಿಸಿದೆ. ಈಗಾಗಲೇ ಭವ್ಯ ಸ್ವಾಗತ ಕೋರಲಾಗಿದ್ದು, ತಮ್ಮ ನೆಚ್ಚಿನ ತಂಡದ ಆಟಗಾರರನ್ನು ಕಣ್ತುಂಬಿಕೊಳ್ಳುವ ಫ್ಯಾನ್ಸ್ ಆಸೆಗೆ ತಣ್ಣೀರುಬಿದ್ದಿದೆ.

ಆರ್ಸಿಬಿ ಆಟಗಾರರ ಓಪನ್ ಪರೇಡ್ ಗೆ ಸರ್ಕಾರ ರೆಡ್ ಸಿಗ್ನಲ್ ಕೊಟ್ಟಿದೆ.ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಆದರೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೂ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದಿದ್ದಾರೆ.

ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು ಎಂದು ಪರಂ ಹೇಳಿದ್ದಾರೆ.

ಸಂಜೆ 5 ಕ್ಕೆ ಕಾರ್ಯಕ್ರಮ..!

ವಿಧಾನಸೌಧದ ಮುಂಭಾಗ ಆರ್ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಟಿಕೆಟ್ ಹಾಗೂ ಪಾಸ್ ಹೊಂದಿದ್ದ ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ಟ್ರಾಫಿಕ್ ಸಮಸ್ಯೆ ಉದ್ಭವವಾಗುವ ಕಾರಣ ಸಾರ್ವಜನಿಕ ಸಾರಿಗೆ ಬಳಸುವಂತೆ ಕೋರಲಾಗಿದೆ. ಮಧ್ಯಾಹ್ನ 3 ಗಂಟೆ ಯಿಂದ ರಾತ್ರಿ 8 ರವರೆಗೆ ವಿಧಾನಸೌಧದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಚಿನ್ನ ಸ್ವಾಮಿ ಸ್ಟೇಡಿಯಂ ಬಳಿ ವಾಹನ ದಟ್ಟಣೆ ಹೆಚ್ಚುವ ಸಂಭವವಿದ್ದು ವಾಹನ ಸವಾರರಿಗೆ ಮುಂಜಾಗೃತೆ ವಹಿಸುವಂತೆ ಕೋರಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ