Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವದಲ್ಲಿಯೇ ಭಾರತಿಯ ಸಂವಿಧಾನ ಶ್ರೇಷ್ಠವಾದದ್ದು: ರವೀಂದ್ರ ಹಾದಿಮನಿ

Advertisement
ಕಾಗವಾಡ: ಸಂವಿಧಾನವನ್ನು ಕೇವಲ ಪಠ್ಯಪುಸ್ತಕಗಳಿಗೆ ಸಿಮಿತಗೊಳಿಸದೆ ಅದನ್ನು ನಿಜ ಜೀವನದಲ್ಲಿ ಪಾಲಿಸಬೇಕು ಇದನ್ನು ಓದಿಕೊಂಡು ಅರ್ಥೈಸಿಕೊಂಡವರು ದೇಶದ ಚಿತ್ರಣವನ್ನು ಕಂಡುಕೊಳ್ಳಬಹುದು. ಭಾರತ ದೇಶದ ಪ್ರಜೆಗಳಾದ ನಮಗೆ ಸಂವಿಧಾನವು ಸಮಾನತೆಯನ್ನು ತಂದುಕೊಟ್ಟಿದೆ ಎಂದು ಕಾಗವಾಡ ತಾಲೂಕಿನ ದಂಡಾಧಿಕಾರಿಗಳಾದ ರವೀಂದ್ರ ಹಾದಿಮನಿಯವರು ಹೇಳಿದರು.

ಕಾಗವಾಡ ಪಟ್ಟಣದ ಶಿವಾನಂದ ಮಹಾವಿದ್ಯಾಲಯದಲ್ಲಿ ಕರ್ನಾಟಕ ಸರಕಾರ ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ, ಸಮಾಜಕಲ್ಯಾಣ ಇಲಾಖೆ ಹಾಗೂ ಮಹಾವಿದ್ಯಾಲಯದ ಸಮಾಜ ವಿಜ್ಞಾನ ಸಂಘ, ಎಸ್.ಸಿ./ಎಸ್.ಟಿ. ಕೋಶ ಮತ್ತು ರಾಷ್ಟಿçÃಯ ಸೇವಾ ಯೋಜನೆ ಘಟಕಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ೭೬ನೇ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಮುಂದುವರೆದು ದೌರ್ಜನ್ಯ ತಡೆ ಸಮಿತಿಯ ಸದಸ್ಯರಾದ ಸಂಜಯ ತಳವಾರÀಕರ ಅವರು ಮಾತನಾಡುತ್ತಾ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದಲ್ಲಿರುವ ಎಲ್ಲ ಚಿಂತಕರ ವಿಚಾರ ಧಾರೆಗಳನ್ನು ಒಂದುಗೂಡಿಸುವ ಪ್ರಯತ್ನವನ್ನು ಸಂವಿಧಾನದ ಮೂಲಕ ಮಾಡಿದ್ದಾರೆ. ಈ ಮೂಲಕ ಅವರು ಸಮಾಜದಲ್ಲಿರುವ ತಾರತಮ್ಯವನ್ನು ಹೊಗಲಾಡಿಸಲು ಪ್ರಯತ್ನಿಸಿದರು. ಪ್ರಜ್ಞಾವಂತ ಜನರಾದ ನಾವು ಇವತ್ತಿನ ಜಾತಿ ಅಸಮಾನತೆಯನ್ನು ನಿವಾರಿಸಬೇಕಾಗಿದೆ ಎಂದು ಕರೆ ನೀಡಿದರು.
ಪಾಶ್ಚಾತ್ಯ ದೇಶಗಳು ಭಾರತದ ಸಂವಿಧಾನವನ್ನು ಮಾದರಿಯಾಗಿ ನೋಡುತ್ತವೆ. ದೇಶದ ಸಂವಿಧಾನಕ್ಕೆ ಧಕ್ಕೆಯಾದರೆ ಇಡಿ ದೇಶಕ್ಕೆ ಅದು ದೊಡ್ಡ ಇಕ್ಕಟ್ಟು ಹೀಗಾಗಿ ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪ್ರೊ. ಆಂಜನೇಯ ಕೆ. ಮತ್ತು ಪ್ರೊ. ಯಲ್ಲಾಲಿಂಗ ಆರ್. ಪೂಜಾರಿ ಹೇಳಿದರು.
ಸಂವಿಧಾನ ಇದು ಬಾಳು ಕಟ್ಟುವ ಪುಸ್ತಕ. ಪ್ರಜಾಪ್ರಭುತ್ವವು ಪ್ರಜೆಗಳಿಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ದೇಶದಲ್ಲಿ ಸಮಾನತೆಯನ್ನು ಸಾರಿದೆ ಎಂದು ಪ್ರಾಚಾರ್ಯರಾದ ಡಾ. ಎಸ್.ಪಿ. ತಳವಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಮಾಜವಿಜ್ಞಾನ ಸಂಘದ ಅಧ್ಯಕ್ಷರಾದ ಡಾ. ಆರ್. ಎಸ್. ಕಲ್ಲೋಳಿಕರ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಎನ್.ಎಸ್.ಎಸ್. ಘಟಕ-೧ರ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಂದ್ರಶೇಖರ ವಾಯ್. ಸ್ವಾಗತಿಸಿದರು. ಪ್ರೊ. ಜೆ.ಎನ್. ನಾಯಿಕ್ ವಂದಿಸಿದರು. ಕುಮಾರ ರೋಹಣ ಪಡನಾಡ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಗವಾಡದ ಪಿ.ಎಸ್.ಐ ರಾಘವೇಂದ್ರ ಖೋತ, ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳಾದ ಕೆ.ಕೆ. ಗಾವಡೆ, ಸಮಾಜಕಲ್ಯಾಣ ಇಲಾಖಾ ಅಧಿಕಾರಿಗಳಾದ ಎಸ್.ಎ. ಮಾಂಗ್, ಪ್ರಕಾಶ ಧೋಡಾರೆ, ಜಯಪಾಲ ಬಡಿಗೇರ, ಅಶೋಕ ಕಾಂಬಳೆ (ಮಾಜಿ ಸೈನಿಕರು) ಬಿಜು ಕಾಂಬಳೆ, ಸುನೀಲ ಮದಭಾವಿ, ಯಲ್ಲಪ್ಪಾ ಕಾಂಬಳೆ, ಐಕ್ಯೂಎಸಿ ಸಂಯೋಜಕರಾದ ಪ್ರೊ. ಬಿ.ಡಿ. ಧಾಮಣ್ಣವರ,ಪ್ರೊ ಆನಂದ ಜಕ್ಕನವರ, ಸೇರಿದಂತೆ ಎಲ್ಲಾ ಇಲಾಖೆಯ ಸಿಬ್ಬಂದಿ ಸೇರಿದಂತೆ ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವರದಿ:ಚಂದ್ರಕಾಂತ ಕಾoಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ