ತುರುವೇಕೆರೆ : ಭಾರತೀಯ ಜನತಾ ಪಕ್ಷದ ತುರುವೇಕೆರೆ ನಗರ ಯುವ ಘಟಕದ ಅಧ್ಯಕ್ಷರನ್ನಾಗಿ ರಾಘವೇಂದ್ರ ಟಿ.ಜಿ. ಅವರನ್ನು ನೇಮಕ ಮಾಡಿ ತಾಲ್ಲೂಕು ಬಿಜೆಪಿ ಮಂಡಲಾಧ್ಯಕ್ಷ ಜಿ.ವಿ.ಪ್ರಕಾಶ್ ಯಾದವ್ ಆದೇಶಿಸಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ನಗರ ಯುವ ಘಟಕದ ನೂತನ ಅಧ್ಯಕ್ಷ ರಾಘವೇಂದ್ರ ಟಿ.ಜಿ., ತುರುವೇಕೆರೆ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹವನ್ನು ಸೇರ್ಪಡೆಗೊಳಿಸಿ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಹಾಗೂ ಬಲವರ್ಧನೆ ಮಾಡುವ ಉದ್ದೇಶದಿಂದ ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಹಾಗೂ ಪಕ್ಷದ ಅಧ್ಯಕ್ಷ ಜಿ.ವಿ.ಪ್ರಕಾಶ್ ಯಾದವ್ ನನ್ನ ಮೇಲೆ ನಂಬಿಕೆ ಇಟ್ಟು ನಗರ ಯುವ ಘಟಕದ ಅಧ್ಯಕ್ಷನನ್ನಾಗಿ ನೇಮಿಸಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬರದಂತೆ ಪಕ್ಷವನ್ನು ಸಂಘಟಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಸಾಲಾ ಜಯರಾಮ್ ಅವರನ್ನು ಶಾಸಕರನ್ನಾಗಿ ಮಾಡುವಲ್ಲಿ ಶ್ರಮಿಸುತ್ತೇನೆ ಎಂದರು.
ವರದಿ: ಗಿರೀಶ್ ಕೆ ಭಟ್

