
ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ-ರಾಜಕಾರಣಿ ಕುಮಾರ್ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಸೇರಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದ್ರು. ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಎಲ್.ಶಿವರಾಮೇಗೌಡ, ಕರ್ನಾಟಕ ರಾಜ್ಯ ಸರ್ಕಾರದ ಪಡಿತರ ವಿತರಕರ ಒಕ್ಕೂಟ ಅಧ್ಯಕ್ಷ ಟಿ.ಕೃಷ್ಣಪ್ಪ, ನಿರ್ಮಾಪಕ ಭಾ.ಮ.ಹರೀಶ್, ಭಾ.ಮ.ಗಿರೀಶ್ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

