Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ

Advertisement
ಬೆಳಗಾವಿ: ತೀವ್ರ ಬೇಸಿಗೆಯ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು  ಜಲ ಜೀವನ ಮಿಷನ್  ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕಾರ್ಯಪಾಲಕ ಅಭಿಯಂತರರು ಬೆಳಗಾವಿ/ಚಿಕ್ಕೋಡಿ ರವರಿಗೆ ಜಿ.ಪಂ. ಸಿಓ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ  ಜಲ ಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾಂತಹ ಗ್ರಾಮಗಳನ್ನು ಜಂಟಿಯಾಗಿ ಗುರುತಿಸಿ, ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನಿಗಾವಹಿಸುವಂತೆ ನಿರ್ದೇಶನ ನೀಡಿದರು.

 

 ಏಪ್ರೀಲ್ ಮತ್ತು ಮೇ ತಿಂಗಳುಗಳಲ್ಲಿ ಬಹುಗ್ರಾಮ ಯೋಜನೆಯ ಕುಡಿಯುವ ನೀರಿನ ಮೂಲಗಳು ಭತ್ತಿಹೊದಲ್ಲಿ ಸಮೀಪವಿರುವ ಖಾಸಗಿ ಬೋರವೆಲ್ ಗಳನ್ನು ಹೈಯರ್ ತೆಗೆದುಕೊಂಡು ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಸಭೆಗೆ ತಿಳಿಸಿದರು. ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ನೀರು ಮತ್ತು ನೈರ್ಮಲ್ಯ  ಸಮಿತಿಯನ್ನು ಯಾವ ರೀತಿ ಮಾಡಬೇಕು ಮತ್ತು ಸಭೆಯ ನಡಾವಳಿಗಳನ್ನು ಸಲ್ಲಿಸಲು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ರವಿ ಬಂಗಾರೆಪ್ಪನವರ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ, ಉಪಕಾರ್ಯದರ್ಶಿ(ಆಡಳಿತ) ಬಸವರಾಜ್ ಹೆಗ್ಗನಾಯಕ್, ಕಾರ್ಯಪಾಲಕ ಅಭಿಯಂತರರು ಶಶಿಕಾಂತ ನಾಯಿಕ ಬೆಳಗಾವಿ ವಿಭಾಗ, ಕಾರ್ಯಪಾಲಕ ಅಭಿಯಂತರರು ಪಾಂಡುರಂಗರಾವ್ ಚಿಕ್ಕೋಡಿ ವಿಭಾಗ ಎಲ್ಲ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಜಿಲ್ಲೆಯ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಎಲ್ಲ  ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಜಿಲ್ಲೆಯ ಎಲ್ಲಾ ಇಂಜಿನಿಯರ್ ಗಳು ಮತ್ತು ನೀರು ಪರೀಕ್ಷಾ ಪ್ರಯೋಗಾಲಯದ   ಸಿಬ್ಬಂದಿಗಳು ವಿಡಿಯೋ ಸಂವಾದದಲ್ಲಿ ಹಾಜರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ