Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೇಶ್ವರ ಗ್ರಾಮದ ಮುಖಂಡರಿಂದ ಮಾಜಿ ಸಚಿವ ರಾಜಶೇಖರ್ ಪಾಟೀಲಗೆ ಸನ್ಮಾನ

Advertisement
ಹುಮನಾಬಾದ: ಹುಮನಾನಾದ ಮತಕ್ಷೇತ್ರ ವ್ಯಾಪ್ತಿಯ ರಾಜೇಶ್ವರ ಗ್ರಾಮ ಪಂಚಾಯತ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿದ್ದ, ಹಿನ್ನಲೆ ನಗರದ ಮಾಜಿ ಸಚಿವರ ಗೃಹ ಕಚೇರಿಯಲ್ಲಿ ಶುಕ್ರವಾರ ರಾಜೇಶ್ವರ ಗ್ರಾಮದ ಮುಖಂಡರು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿ ರಾಜಶೇಖರ ಪಾಟೀಲ್,ಹುಮನಾಬಾದ್ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ನನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ.

ಕ್ಷೇತ್ರದ ಅಭಿವೃದ್ಧಿಗೆ ಸಂಭಂಧಿಸಿದಂತೆ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಸಮಯಕ್ಕೊಂದು ಹೇಳಿಕೆಗಳನ್ನು ನೀಡಿ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ ನಮಗೆ ಸರಿಯಾದ ಅನುದಾನ ಸಿಗುತ್ತಿಲ್ಲ ಅಭಿವೃದ್ಧಿ ಕಾರ್ಯಗಳು ಹೇಗೆ ಮಾಡಬೇಕು ಎಂದು ಹೇಳಿಕೆ ನೀಡುತ್ತಾರೆ, ಮತ್ತೊಂದು ಕಡೆ ಎಲ್ಲ ಅಭಿವೃದ್ಧಿ ಕಾರ್ಯ ನಾನು ಶಾಸಕನಾದ ಮೇಲೆ ನಡೆಯುತ್ತಿವೆ ಎಂದು ಹೇಳುತ್ತಿದ್ದಾರೆ.ಅನುದಾನ ಇಲ್ಲದೇ ಅವರು ಹೇಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಹುಮನಾಬಾದ್ ಪುರಸಭೆ ನಗರಸಭೆಯಾಗಿ ಹಾಗೂ ರಾಜೇಶ್ವರ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು ನಾವು ನಮ್ಮ ಸರಕಾರದ ಮೇಲೆ ಹಾಕಿರುವ ಒತ್ತಡ ಹಾಗೂ ಸತತ ಪ್ರಯತ್ನದ ಫಲವಾಗಿ ಈ ಎಲ್ಲ ಬೇಡಿಕೆಗಳು ಈಡೇರಲು ಸಾಧ್ಯವಾಗಿದೆ ಎಂದು ಹೇಳಿದರು.

ವರದಿ:ಸಜೀಶ ತಾಳಮಡಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ