Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಆರೋಗ್ಯಕ್ಕೆ ಸಮಯಕ್ಕೆ ಸರಿಯಾಗಿ ಆಹಾರ ಸೇವನೆ & ಶುಚಿ ಪರಿಸರ ಅಗತ್ಯ: ವೈದ್ಯಾಧಿಕಾರಿ ರಾಜೇಂದ್ರ ಕಿಲಬನೂರ

Advertisement
ರಾಮದುರ್ಗ: ಹೃದಯಾಘಾತಕ್ಕೆ ಎಣ್ಣೆ ಪದಾರ್ಥಗಳ ಸೇವನೆ ಕಾರಣ, ಅದರಿಂದ ದೂರವಿದ್ದರೆ ಹೃದಯಾಘಾತವನ್ನು ತಪ್ಪಿಸಬಹುದು ಎಂದು ಸುರೇಬಾನ-ಶಿವಪೇಠ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಂದ್ರ ಕಿಲಬನೂರ ಹೇಳಿದರು.

ಅವರು ತಾಲೂಕಿನ ಶಿವಪೇಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸಮಯಕ್ಕೆ ಸರಿಯಾಗಿ, ಪದಾರ್ಥಗಳನ್ನು ಸೇವನೆ ಮಾಡುದುದರಿಂದ ನಮ್ಮ ದೇಹವನ್ನು ಆರೋಗ್ಯವಾಗಿಡಲು ಸಹಾಯವಾಗುತ್ತಿದೆ. ಇದಕ್ಕೆಲ್ಲದಕ್ಕೂ ಮೋದಲು ನಾವು ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ಕೈಗಳನ್ನು ಸ್ವಚ್ಛ ಇಡುವುದರಿಂದ ನಮ್ಮ ಆರೋಗ್ಯಕ್ಕೆ ಹಾನಿ ಆಗುವುದಿಲ್ಲ ಎಂದು ಹೇಳಿದ ಅವರು, ಪೋಷಣಾ ಅಭಿಯಾನವನ್ನು ಸರಕಾರ ಮೊದಲು ಅಂಗನವಾಡಿಯಲ್ಲಿ ಮಾತ್ರ ಕಡ್ಡಾಯಗೊಳಿಸಿತ್ತು, ಆದರೆ ಈಗ ಪ್ರಾಥಮಿಕ ಶಾಲೆಯಲ್ಲಿಯು ಪ್ರಾರಂಭಿಸಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.



ಪತ್ರಕರ್ತರಾದ ಎಸ್ ಆರ್ ಗುರುಬಸಣ್ಣವರ ಮಾತನಾಡಿ, ವೈದ್ಯಾಧಿಕಾಗಳ ಮಾರ್ಗದರ್ಶನದಲ್ಲಿ ನಡೆದದ್ದೇ ಆದರೆ ನಮಗೆ ಯಾವುದೇ ತರಹದ ರೋಗ ರುಜಿನಿಗಳು ಬರುವುದಿಲ್ಲ ನಾವು ಅದನ್ನು ಪಾಲಿಸೋಣ ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮನ ಮುಟ್ಟಿಸುವಂತಹ ವಿವಿಧ ರೀತಿಯ ದವಸ-ಧಾನ್ಯಗಳನ್ನು ಹಾಗೂ ವಿವಿಧ ರೀತಿಯ ತರಕಾರಿಗಳನ್ನು ಇಡಲಾಗಿತ್ತು. ಮಕ್ಕಳಿಗೆ ನೆಣೆಸಿ ಕಾಳುಗಳನ್ನು ಸಹ ಸೇವನೆಗೆ ನೀಡಲಾಯಿತು.
ವೇದಿಕೆಯ ಮೇಲೆ ಎಸ್ಡಿಎಂಸಿ ಅಧ್ಯಕ್ಷ ಬಸಪ್ಪ ಬೇವಿನಮರದ, ಉಪಾಧ್ಯಕ್ಷೆ ತಳವಾರ ಇದ್ದರು.
ಸಂತೋಷ ಕೊರಿ ಶಿಕ್ಷಕರು ಸ್ವಾಗತಿಸಿ, ನಿರೂಪಿಸಿದರು. ಪ್ರ.ಮುಖ್ಯೋಪಾಧ್ಯಾಯರಾದ ಆತ್ಮಾನಂದ ಪಲ್ಲೇದ ವಂದಿಸಿದರು.

ವರದಿ: ಕುಮಾರ ಎಂ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ