'ನ್ಯಾಯ ಎಲ್ಲಿದೆ' ಹಾಗೂ 'ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ' ಎಂಬ ಎರಡು ಹಾಡುಗಳನ್ನು ನಟ ರಕ್ಷಿತ್ ಶೆಟ್ಟಿ ಅವರು ತಮ್ಮ ನಿರ್ದೇಶನದ ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಬಳಸಿದ್ದರು. ಈ ಹಿನ್ನಲೆಯಲ್ಲಿ MRT ಮ್ಯೂಸಿಕ್ ಸಂಸ್ಥೆಯ ಪಾಲುದಾರ ನವೀನ್ ಕುಮಾರ್ ಎಂಬುವರು ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಾಗಾಗಿ ನಟ ರಕ್ಷಿತ್ ಶೆಟ್ಟಿ ಅವರು ಇಂದು ಯಶವಂತಪುರ ಠಾಣೆಗೆ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಮೇಲಿರುವ ಎಫ್ ಐ ಆರ್ ರದ್ದು ಕೋರಿ ಈ ಹಿಂದೆ ಅವರು ಕೋರ್ಟ್ ಮೊರೆ ಕೂಡ ಹೋಗಿದ್ದರು. ಠಾಣೆಯಲ್ಲಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

