Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ರಾಮಚಂದ್ರ ಗುಹಾ ಆಯ್ಕೆ

Advertisement

ಬೆಂಗಳೂರು : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ- ಕರ್ನಾಟಕಕ್ಕೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಪ್ರಮುಖ ಕೃತಿಗಳು:

India After Gandhi (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ)

A Corner of a Foreign Field (ಭಾರತೀಯ ಕ್ರಿಕೆಟ್‌ನ ಸಾಮಾಜಿಕ ಇತಿಹಾಸ)

Gandhi Before India (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ)

Gandhi: The Years That Changed the World (ಜೀವನಚರಿತ್ರೆಯ ಎರಡನೇ ಭಾಗ)

The Unquiet Woods (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ)

ಈ ಕೃತಿಗಳು ಇತಿಹಾಸ ಅಧ್ಯಯನವನ್ನು ಶ್ರೀಮಂತಗೊಳಿಸುವುದಷ್ಟೇ ಅಲ್ಲದೆ, ಸಾಮಾನ್ಯ ಓದುಗರಿಗೂ ಸುಲಭವಾಗಿ ತಲುಪುವ ಶೈಲಿಯಲ್ಲಿ ಬರೆದಿರುವುದರಿಂದ ಸಮಾಜದಲ್ಲಿ ಚಿಂತನ-ಮನನಕ್ಕೆ ಪ್ರೇರಣೆಯಾಗಿವೆ.

ವಿಶೇಷವಾಗಿ ಗಾಂಧೀ ತತ್ವಗಳನ್ನು ಆಳವಾಗಿ ವಿಶ್ಲೇಷಿಸಿ ಅವನ್ನು ಸಮಕಾಲೀನ ಭಾರತಕ್ಕೆ ಸಂಬಂಧಿಸಿದಂತೆ ಅರ್ಥೈಸುವಲ್ಲಿ ಡಾ. ಗುಹಾ ಅವರಿಗೆ ಒಂದು ವಿಶಿಷ್ಟ ಸ್ಥಾನವಿದೆ. ಅವರ ಗಾಂಧೀಜಿಯವರ ಎರಡು ಸಂಪುಟಗಳ ಜೀವನಚರಿತ್ರೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ.

ರಾಜ್ಯ ಸರ್ಕಾರವು ಈ ಪ್ರಶಸ್ತಿಯ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ.

ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ