ಹಾಸನ: ನಾನು ಯಾವುದೇ ದಾಖಲೆ ಇಲ್ಲದೇ ಯಾರ ಬಗ್ಗೆಯೂ ಮಾತನಾಡಲು ಹೋಗುವುದಿಲ್ಲ, ಅಮೆರಿಕಗೆ ಹೋಗುವ ಮುನ್ನ ಏನು ಹೇಳಿಕೆ ನೀಡಿದ್ದೆ, ಅದಕ್ಕೆ ಬದ್ದನಾಗಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಮೆರಿಕ ಪ್ರವಾಸದಿಂದ ವಾಪಸ್ ಆಗಿ, ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ನಾನು ಒಂದು ಪದ ಬಳಸಿದ್ದಕ್ಕೆ ಕಳೆದ ಹತ್ತು ದಿನಗಳಿಂದ ಕುಮಾರಸ್ವಾಮಿ ಯಾವಾಗ ಬರ್ತಾರೆ?
ನಂದೇನಿದೆ, ನಂದೇನಿದೆ ಎಂದು ಎಷ್ಟು ಜನ ರಾತ್ರಿಯೆಲ್ಲಾ ಕನವರಸಿಕೊಂಡಿದ್ದಾರೆ ಅನ್ನೋದು ಗೊತ್ತಿದೆ. ಆದರೆ ಮಾಧ್ಯಮ ಸ್ನೇಹಿತರಿಗೆ ನಿರಾಸೆ ಮಾಡಲ್ಲ ಒಳ್ಳೆಯ ಆಹಾರ ಕೊಡ್ತೇನೆ ಎಂದು ಹೇಳಿದ್ದಾರೆ.
ಈಗಾಗಲೇ ರಾಜಣ್ಣರ ಧ್ವನಿ ನಿಲ್ಲಿಸಿದ್ರು, ರಮೇಶ್ ಜಾರಕಿಹೋಳಿ ಮುಗ್ಸಿದ್ರು. ಸತೀಶ್ ಜಾರಕಿಹೊಳಿ ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳುತ್ತಿದ್ದರು.
ಹೀಗಾಗಿ ಈಗ ಅವರನ್ನೂ ಹೇಗೆ ಮುಗಿಸಬೇಕೆಂದು ಸಿದ್ದತೆ ಮಾಡಿಕೊಂಡರು. ಮುಖ್ಯಮಂತ್ರಿಗಳು ಹೇಳುತ್ತಾರೆ ಇಡಿಯಿಂದ ಇನ್ನು ಕೆಲವು ಸಚಿವರ ಮೇಲೆ ದಾಳಿ ನಡೆಯುತ್ತದೆ ಎಂದು ಹೇಳಿದ್ದಾರೆ. ಅವರಿಗೆ ಹೇಗೆ ಮಾಹಿತಿ ಸಿಕ್ಕಿದೆ? ಎಂದಿದ್ದಾರೆ.


