LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ರಸಗುಲ್ಲಾ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿ ಸಾವು : ಮದುವೆ ಮನೆಯಲ್ಲಿ ಈಗ ಸಶ್ಮಾನ ಮೌನ

Advertisement
ಜಮ್‌ಶೆಡ್‌ಪುರ : ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ರಸಗುಲ್ಲಾ ಸೇವನೆಯು ವ್ಯಕ್ತಿಯೊಬ್ಬರ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದ ಘಟನೆ ಜಾರ್ಖಂಡ್‌ನ ಜಮ್‌ಶೆಡ್‌ಪುರ ಸಮೀಪದ ಮಲಿಯಂತ ಗ್ರಾಮದಲ್ಲಿ ಶುಕ್ರವಾರ (ಮಾ.13) ನಡೆದಿದೆ.

ಲಲಿತ್ ಸಿಂಗ್ (41) ಮೃತ ದುರ್ದೈವಿ. ತಡರಾತ್ರಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಲಲಿತ್ ಸಿಂಗ್ ಕೂಡ ಪಾಲ್ಗೊಂಡಿದ್ದರು.

ಊಟದ ಸಮಯದಲ್ಲಿ ರಸಗುಲ್ಲಾ ತಿನ್ನುತ್ತಿದ್ದಾಗ, ಅದು ಅವರ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಅವರಿಗೆ ತಕ್ಷಣವೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಸಿಂಗ್ ಅವರು ಉಸಿರಾಡಲು ಕಷ್ಟಪಡುತ್ತಿರುವುದನ್ನು ಕಂಡು ಅಲ್ಲಿದ್ದ ಅತಿಥಿಗಳು ಮತ್ತು ಸಂಬಂಧಿಕರು ಅವರ ಗಂಟಲಿನಲ್ಲಿ ಸಿಲುಕಿದ್ದ ರಸಗುಲ್ಲಾವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಅವರ ಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣ ಅವರನ್ನು ಜಮ್‌ಶೆಡ್‌ಪುರದ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರಿಶೀಲಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಸಂಭ್ರಮದ ಮದುವೆ ಮನೆಯು ಈ ಹಠಾತ್ ಸಾವಿನಿಂದಾಗಿ ಸ್ಮಶಾನ ಮೌನಕ್ಕೆ ಶರಣಾಗಿದೆ. ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ದುಃಖದಲ್ಲಿ ಮುಳುಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ