Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಲಿ : ಆರ್. ಬಿ.ತಿಮ್ಮಾಪುರ್

Advertisement
ಬೆಂಗಳೂರು : ಸದನದಲ್ಲಿ ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರಿಗೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ ತಿರುಗೇಟು ಕೊಟ್ಟಿದ್ದಾರೆ.

ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಲಿ. ಇವರು ಹೇಳಿದ ತಕ್ಷಣ ರಾಜೀನಾಮೆ ನೀಡಬೇಕಾ?ಅವರ ಹತ್ತಿರ ಏನು ಸಾಕ್ಷಿ ಇದೆ ಅಂತಾ ತಿಮ್ಮಾಪುರ ಪ್ರಶ್ನಿಸಿದ್ದಾರೆ.

ವಿಡಿಯೋದಲ್ಲಿ ಇರುವವನ ಇತಿಹಾಸ ಗೊತ್ತಾ ಇವರಿಗೆ? ಅಬಕಾರಿ ಡಿಸಿ ಸಸ್ಪೆಂಡ್ ಆಗಿದ್ದಾನೆ, ಜೈಲಿಗೆ ಹೋಗಿದ್ದಾನೆ. ಸಿಎಂ ಸೇರಿ ಯಾರೂ ಬೆನ್ನಿಗೆ ನಿಲ್ಲುವ ಅವಶ್ಯಕತೆ ಬರಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ತಿಮ್ಮಾಪುರ ಕಿಡಿಕಾರಿದ್ರು.

ಸದನದಲ್ಲಿ ಗದ್ದಲ ಗಲಾಟೆ ಹಾಗೂ ವಿರೋಧ ಪಕ್ಷಗಳ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದ ಕಾರಣ ಸಿದ್ದರಾಮಯ್ಯ ಸದನಕ್ಕೆ ಸ್ವಲ್ಪ ತಡವಾಗಿಯೇ ಬಂದರು. ಅದಕ್ಕೂ ಮೊದಲು ಸಿದ್ದರಾಮಯ್ಯ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ತಿಮ್ಮಾಪುರ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ತಿಮ್ಮಾಪುರ, 'ಬಿಜೆಪಿಯವರು ಹೇಳಿದ ಹಾಗೆ ರಾಜೀನಾಮೆ ಕೊಟ್ಟರೆ ಸರ್ಕಾರ ನಡೆಸಲು ಆಗುತ್ತಾ? ಏನು ಸಾಕ್ಷ್ಯ ಇದೆ ನನ್ನ ವಿರುದ್ಧ? ಇದೊಂದು ರಾಜಕೀಯ ಷಡ್ಯಂತ್ರ' ಎಂದರು.

'ಬಿಜೆಪಿಯವರು ತಪ್ಪು ಮಾಡುತ್ತಿದ್ದಾರೆ. ಒತ್ತಡದಿಂದ ಅವರು ಹೀಗೆ ಮಾಡುತ್ತಿದ್ದಂತೆ ಕಾಣಿಸುತ್ತಿದೆ. ನಾನು ಸದನದಲ್ಲಿ ಈಗಾಗಲೇ ಈ ಬಗ್ಗೆ ಮಾತನಾಡಿದ್ದೇನೆ. ಯಾವುದೋ ಅಧಿಕಾರಿ ಫೋನ್‌ನಲ್ಲಿ ಮಾತಾಡಿದರೆ ಅದಕ್ಕೆ ಮತ್ತು ನನಗೆ ಏನು ಸಂಬಂಧ? ಯಾರು ತಪ್ಪು ಮಾಡಿದ್ದಾರೊ ಅವರು ಅನುಭವಿಸ್ತಾರೆ' ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ