ಕಲಾದಗಿ : ಬಾಗಲಕೋಟೆಯ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ, ಇಲ್ಲಿನ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಮುಳುಗಡೆ ಜಮೀನಿಗೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಷಯಗಳ ಬಗ್ಗೆ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಮುಳುಗಡೆ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ಹಾಗೂ ಅವರ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಬೀಳಗಿ ಮತಕ್ಷೇತ್ರದ ಶಾಸಕ ಜೆ. ಟಿ. ಪಾಟೀಲ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಗದೀಶ ಗುಡಗುಂಟಿ, ಬಾಗಲಕೋಟೆ ಮತ ಕ್ಷೇತ್ರದ ಶಾಸಕ ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಬಸವರಾಜ ಪೂಜಾರಿ.

