Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ ಶಾಲೆಗೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಸನ್ಮಾನ.

Advertisement
ಸಿರುಗುಪ್ಪ: ನಗರದ ರೇಣುಕಾಶ್ರಮದ ಹತ್ತಿರದ ಸಾಧನಾ ತರಬೇತಿ ಕೇಂದ್ರದಿಂದ ಜರುಗಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ನಿವೃತ್ತ ಮುಖ್ಯಗುರು ಹಾಗೂ ಶಿವಶರಣೆ ನೀಲಮ್ಮ ಬ್ಯಾಂಕಿನ ಅಧ್ಯಕ್ಷರಾದ ಪಂಪನಗೌಡ ಅವರು ಉದ್ಘಾಟಿಸಿದರು.

ನಂತರ ಮಾತನಾಡಿ ಮಕ್ಕಳು ಇತ್ತೀಚೆಗೆ ಮೊಬೈಲ್‌ನ ದುಷ್ಪರಿಣಾಮದಿಂದ ದೂರವಿಡಲು ಈ ಬೇಸಿಗೆ ಶಿಬಿರವು ಸೂಕ್ತವಾಗಿದೆ.
ಸರ್ಕಾರದ ಅಧೀನದಲ್ಲಿನ ಪ್ರತಿಷ್ಟೆಯ ಶಾಲೆಗಳ ಪ್ರವೇಶ ಪರೀಕ್ಷೆ ಬರೆಸುವ ಪೋಷಕರ ಪಡುವ ಶ್ರಮ ಅಗತ್ಯವಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಯಿಲ್ಲದೇ ಪ್ರತಿಷ್ಟಿತ ಸರ್ಕಾರಿ ವಸತಿಯುತ ಶಾಲೆಗಳಿಗೆ ಆಯ್ಕೆಯಾಗುವುದು ಕಷ್ಟಕರ.



ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಆಯ್ಕೆಗೆ ಕಾರಣರಾದ ತರಬೇತಿ ಕೇಂದ್ರದ ಎಲ್ಲಾ ಭೋದಕ ಕೀರ್ತಿ ಸಲ್ಲುತ್ತದೆಂದರು.ಸಾಧನಾ ಇಂಟರ್‌ನ್ಯಾಷನಲ್ ಶಾಲೆಯ ಅಧ್ಯಕ್ಷ ಲಿಂಗನಗೌಡ ಮಾತನಾಡಿ ಮಕ್ಕಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದಲ್ಲಿ ಸ್ಪರ್ಧೆಯನ್ನು ನೀಡುವುದರಿಂದ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳು ಸುಲಭವಾಗುತ್ತವೆಂಬ ದೃಷ್ಟಿಯಿಂದ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ತರಬೇತಿಯನ್ನು ನೀಡಲಾಗುತ್ತಿದೆ.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-24-at-6.21.54-PM.mp4"][/video]


ಪೋಷಕರ ಭರವಸೆಯಂತೆ ನವೋದಯ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್, ಅಬ್ದುಲ್ ಕಲಾಂ ವಸತಿಯುತ ಶಾಲೆಗಳಿಗೆ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಆಯ್ಕೆಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

ಶಿಕ್ಷಣದ ಜತೆ ಜತೆಗೆ ಮಕ್ಕಳಿಗೆ ದ್ಯಾನ, ವ್ಯಾಯಾಮ ಇನ್ನಿತರ ಸಂಸ್ಕಾರಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳ ಸಾಧನೆಗೆ ಕಾರಣವಾದ ನಮ್ಮ ಸಾಧನಾ ಕೋಚಿಂಗ್ ಸೆಂಟರ್ ಬಗ್ಗೆ ಇನ್ನಿತರರಿಗೆ ತಿಳಿಸಿ ನಮ್ಮ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕೆಂದು ತಿಳಿಸಿದರು.

ಇದೇ ವೇಳೆ ಮುಖ್ಯಗುರು ಧರ್ಮಣ ಮುಖಂಡರಾದ ಆರ್.ಸಿ.ಪಂಪನಗೌಡ, ವೀರನಗೌಡ, ಹಾಗೂ ಕೋಚಿಂಗ್ ಸೆಂಟರ್‌ನ ಬೋಧಕ ಮತ್ತು ಭೋದಕೇತರ ಸಿಬ್ಬಂದಿಗಳು, ಮಕ್ಕಳು, ಪೋಷಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ