LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ : ಬಸವರಾಜ ಹೊರಟ್ಟಿ 

Advertisement

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿದೆ. 

ಆರಂಭದಲ್ಲಿ ಆಗಸ್ಟ್ 14 ರಂದು ನಡೆಯಲಿದ್ದ ಸದನದಲ್ಲಿಯೇ ಎಲ್ಲ ಸದಸ್ಯರಿಗೆ ಧನ್ಯವಾದ ಸಲ್ಲಿಸಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಲು ಹೊರಟ್ಟಿ ಅವರು ನಿರ್ಧರಿಸಿದ್ದರು.

ಆದರೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ನಿರೀಕ್ಷೆಗಿಂತ ಮುಂಚಿತವಾಗಿಯೇ ರಾಜೀನಾಮೆ ನೀಡಿದ್ದು, ಸರ್ಕಾರದ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

ಈ ರಾಜಕೀಯ ಬೆಳವಣಿಗೆಯ ಬೆನ್ನಲ್ಲೇ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದು, ತಮ್ಮ ರಾಜೀನಾಮೆಗೆ ಹಿನ್ನೆಲೆಯಾದ ಘಟನೆಗಳನ್ನು ಬಹಿರಂಗಪಡಿಸಿದ್ದಾರೆ. 

ಸರ್ಕಾರದ ಕಡೆಯಿಂದ ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪಗಳಿಗೆ ಈ ಪತ್ರ ಮತ್ತಷ್ಟು ಪುಷ್ಟಿ ನೀಡಿದೆ.

ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಯಾವ ಪರಿಸ್ಥಿತಿಯಲ್ಲಿ ತಾವು ಈ ನಿರ್ಧಾರಕ್ಕೆ ಬರಬೇಕಾಯಿತು ಎಂಬುದನ್ನು ಅವರು ಪತ್ರದಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ.

ಪತ್ರದ ಸಾರಾಂಶದ ಪ್ರಕಾರ, ನೂತನ ಎಂಎಲ್‌ಸಿಗಳ ಪ್ರಮಾಣವಚನ ಕಾರ್ಯಕ್ರಮ ಮುಗಿದ ತಕ್ಷಣವೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಹಲವು ಎಂಎಲ್‌ಸಿಗಳು ತಮ್ಮ ಕೊಠಡಿಗೆ ಆಗಮಿಸಿದ್ದರು. 

ಆಗಸ್ಟ್ 14ರ ವರೆಗೆ ಕಾಯದೆ, "ಇಂದೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ" ಎಂದು ಅವರು ಸೂಚಿಸಿದರು. ಈ ಅನಿರೀಕ್ಷಿತ ಬೆಳವಣಿಗೆಯಿಂದ ತಮಗೆ ತೀವ್ರ ಆಶ್ಚರ್ಯವಾಯಿತು ಎಂದು ಹೊರಟ್ಟಿ ತಿಳಿಸಿದ್ದಾರೆ.

ಆ ಘಳಿಗೆಯಲ್ಲಿ ಎದುರಾದ ಮುಜುಗರದ ವಾತಾವರಣ ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಸಿಎಂ ಮನವಿಗೆ ಒಪ್ಪಿ ತಾವು ತಕ್ಷಣವೇ ರಾಜೀನಾಮೆ ಸಲ್ಲಿಸಬೇಕಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಯುವಕರ ಸಹಕಾರ ಅನಿವಾರ್ಯ : ಶೇಖರ ಗೌಡ ಪಾಟೀಲನನ್ನನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ : ಕೆ. ಎಸ್ ಈಶ್ವರಪ್ಪ ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ : ಬಸವರಾಜ ಹೊರಟ್ಟಿ ಸತ್ತವರ ಹೆಸರಿನಿಂದ ಗೃಹಲಕ್ಷ್ಮಿ ಹಣ ತೆಗೆದರೇ ಜೈಲು ಶಿಕ್ಷೆ : ಗ್ಯಾರಂಟಿ ಸಮಿತಿ ಎಚ್ಚರಿಕೆ ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿಗನ ಜೊತೆ ಸಂಪರ್ಕ : ಯುವಕ ಅರೆಸ್ಟ್ SIR ಪರಿಷ್ಕರಣೆ ವೇಳೆ ಡಿಲೀಟ್ ಆದವರ ಪತ್ತೆಗೆ ಕಾಂಗ್ರೆಸ್ ಅಭಿಯಾನ : ಬಿ. ಕೆ ಹರಿಪ್ರಸಾದ್ ಸಿನಿಮೀಯ ರೀತಿಯಲ್ಲಿ ಹಾಡಹಗಲೇ ಪತ್ರಕರ್ತನ ಕಿಡ್ನ್ಯಾಪ್ ಭಾರೀ ಮಳೆಗೆ ಅಮರನಾಥ ಯಾತ್ರೆ ಸ್ಥಗಿತ ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್