Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಭಾಷೆಯನ್ನು ಗೌರವಿಸಿ ನಮ್ಮ ಭಾಷೆಯನ್ನು ಪ್ರೀತಿಸಿ: ಸ್ವಾಮಿ ಬಿ ಹಿರೇಮಠ

Advertisement
ಸೇಡಂ: ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಘಟಕ ಸೇಡಂ ವತಿಯಿಂದ ತಾಲೂಕಿನ ದುಗನೂರು ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅಧ್ಯಕ್ಷತೆ ಶಾಲೆಯ ಮುಖ್ಯ ಗುರುಗಳಾದ ಚಂದ್ರಶೇಖರ್ ಪಸಾರ್ ರವರು ವಹಿಸಿದರು.



ಕಾರ್ಯಕ್ರಮದ ಉದ್ಘಾಟನೆ ನಾಗಮ್ಮ ಜಗದೇವಪ್ಪ ಸೌಕಾರ್ ನಾಚ್ವರ್ ಗ್ರಾಮ ಪಂಚಾಯತ್ ಅಧ್ಯಕ್ಷರು ದುಗನೂರ್ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ವರದಾ ಸ್ವಾಮಿ ಬಿ ಹಿರೇಮಠ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಕಲ್ಬುರ್ಗಿ ಮತ್ತು ಶರಣಬಸಪ್ಪ ಸಿ,ಆರ್,ಪಿ ದುಗನೂರು ಕ್ಲಸ್ಟರ್, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕ ಅಧ್ಯಕ್ಷರಾದ ಅಶೋಕ್ ಮಡಿವಾಳ, ವಿದ್ಯಾನಂದ ಸ್ವಾಮಿ, ನಾರಾಯಣ ಬೋವಿನ್, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವರದಾ ಸ್ವಾಮಿ ಬಿ ಹಿರೇಮಠ ಅವರು ಮುಧೋಳ ಮತ್ತು ಕೋಲ್ಕುಂದ ವಲಯದಲ್ಲಿ ಬರುವ ಕೆಲವು ಹಳ್ಳಿಗಳಲ್ಲಿ ತೆಲುಗು ಭಾಷೆ ಪ್ರಭಾವ ಹೆಚ್ಚಾಗಿ ಮನೆಗಳಲ್ಲಿ ಹಾಗೂ ಗ್ರಾಮದಲ್ಲಿ ಮಾತನಾಡುತ್ತಿರುವದರಿಂದ ಕನ್ನಡ ಭಾಷೆ ಮತ್ತು ಮಕ್ಕಳಿಗೆ ವಿದ್ಯಾಭಾಸ ಮಾಡಲು ತೊಂದರೆ ಆಗುತ್ತಿರುವುದು ಕಂಡು ಬರುತ್ತಿದೆ. ಮಕ್ಕಳನಿಂದಲೇ ಮನೆಯಲ್ಲಿ ಪೋಷಕರಿಗೆ ಕನ್ನಡ ಭಾಷೆ ಮಾತನಾಡುವಂತೆ ಶಾಲೆಯ ಆವರಣದಲ್ಲಿ ಸಸಿ ನೆಡುವುದರ ಮೂಲಕ ಕನ್ನಡ ಭಾಷೆ ಬಗ್ಗೆ ಜಾಗೃತರಾಗಲು ಇಂಥ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ತಿಳಿಸಿದರು.

ತದನಂತರ ಶಿಕ್ಷಣ ಪ್ರೇಮಿಗಳಾದ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ನವದ್ ರೆಡ್ಡಿ ಮಲ್ಕಪಲ್ಲಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನವೀನ್ ಸಹ ಶಿಕ್ಷಕರು, ಮಂಗಳ ಸಹ ಶಿಕ್ಷಕರು, ಶಾಮಪ್ಪ ತಳವಾರ್ , ಗುರುಪ್ರಸಾದ್, ಶಾಲೆಯ ಸಹ ಶಿಕ್ಷಕರುಗಳು ಮತ್ತು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಕಾರ್ಯಕರ್ತರು ಶಾಲೆ ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ