Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ : ಪತ್ರ ವೈರಲ್ 

Advertisement
ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ,ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ ಬರೆದಿರುವ ಪತ್ರ ವೈರಲ್ ಆಗಿದೆ.

ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ ಇಲಾಖೆ ಇವರಿಗೆ ಸರ್ಕಾರದ ಅಧೀನ ಕಾರ್ಯದರ್ಶಿ ಸಿಆಸುಇ (ಕಾರ್ಯಕಾರಿ) ಬರೆದಿರುವ ಪತ್ರವು ಮಾಧ್ಯಮದವರು ವಿಧಾನಸೌಧ ಕಟ್ಟಡದಲ್ಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ನಿರ್ದೇಶನ ನೀಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಪತ್ರದ ವಿವರ: ಈ ವಿಷಯಕ್ಕೆ ಸಂಬಂಧಿಸಿದಂತೆ ಸದರಿ ಪತ್ರದಲ್ಲಿನ ಕೋರಿಕೆಯ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಆಸು ಇಲಾಖೆ (ಕಾರ್ಯಕಾರಿಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ.

ಈ ರೀತಿಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಬೈಟ್/ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಹಾಗೂ ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು/ ಮಾನ್ಯ ಉಪ ಮುಖ್ಯಮಂತ್ರಿಗಳು/ ಮಾನ್ಯ ಸಚಿವರುಗಳು/ ಗಣ್ಯ ವ್ಯಕ್ತಿಗಳಿಂದ ಬೈಟ್ ತೆಗೆದುಕೊಳ್ಳಲು ಹಿಂಬಾಲಿಸದಂತೆ ಸೂಕ್ತ ಸಲಹೆ/ ಸೂಚನೆಗಳನ್ನು ನೀಡುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಹೇಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ