ನವದೆಹಲಿ :ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿಸಲಾದ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.
ಒಟ್ಟು 823 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದ್ದು, ದೇಶದ ಜನರ ಕಣ್ಣು ಈ ಫಲಿತಾಂಶದ ಮೇಲಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಈ ಬಾರಿ ಚುನಾವಣೆ ನಡೆದಿದೆ.ಒಟ್ಟು 823 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗವು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ತಮಿಳುನಾಡು: ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಮೈತ್ರಿಕೂಟಗಳ ನಡುವೆ ಭಾರಿ ಪೈಪೋಟಿ ಇದೆ.
ಕೇರಳ: ಆಡಳಿತಾರೂಢ ಎಲ್ಡಿಎಫ್ (LDF) ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ಯುಡಿಎಫ್ (UDF) ಕಮ್ಬ್ಯಾಕ್ ಮಾಡುತ್ತಾ ಎಂಬುದು ಕುತೂಹಲ ಮೂಡಿಸಿದೆ.

