Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಪಾಶ್ಚಿಮಾತ್ಯಶೈಲಿಗೆ ಮಾರುಹೋಗಬಾರದು: ಮೆಥೋಡಿಸ್ಟ್ ಚರ್ಚ್ ನ ಸಭಾಪಾಲಕರಾದ ರೆವಿಡೆಂಟ್ ಜಯಂತ ಎಲೀಯಾ

Advertisement
ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಶೈಲಿಗೆ ಮಾರುಹೋಗದೇ, ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಬೆಳಸಬೇಕು ಎಂದು ಮೆಥೋಡಿಸ್ಟ್ ಚರ್ಚ್ ನ ಸಭಾಪಾಲಕರಾದ ರೆವಿಡೆಂಟ್ ಜಯಂತ ಎಲೀಯಾ ಅವರು ತಿಳಿಸಿದರು.



ನಗರದ ಬೆನೆನ್ ಸ್ಮಿಥ್ ಮೆಥೋಡಿಸ್ಟ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ನಾಡಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಯನ್ನು ಅಳವಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿಯು ನಶಿಸಿ ಹೋಗುತ್ತಿದೆ. ಕರ್ನಾಟಕದಲ್ಲಿ ಪ್ರತಿ 20 ಕಿ.ಮೀ ಗೆ ಭಾಷೆ, ವೇಷಭೂಷಣ, ಆಚಾರ-ವಿಚಾರಗಳು ಬದಲಿಯಾಗುತ್ತವೆ. ಕೊಡುಗಿನ ಉಡುಪು, ಉತ್ತರ ಕರ್ನಾಟಕದ ಚೋಳದ ರೊಟ್ಟಿ ಊಟ, ಬೆಳಗಾವಿಯ ಕುಂದಾ, ಧಾರವಾಡದ ಪೇಂಡಾ ಸೇರಿದಂತೆ ಇತರೆ ಸಂಸ್ಕೃತಿಯನ್ನು ಹೊಂದಿದ ನಾಡು ನಮ್ಮದು. ಇದನ್ನು ಅಳವಡಿಸಿಕೊಂಡು ಬೆಳೆಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.



ಮಹಾವಿದ್ಯಾಲಯದ ಪ್ರಾಚಾರ್ಯ ಸಾಮುವೇಲ್ ಡ್ಯಾನಿಯೇಲ್ ಅವರು ಮಾತನಾಡಿ, ಕರ್ನಾಟಕದ ನಾನಾ ಭಾಗಗಳಲ್ಲಿರುವ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ನಾಡಹಬ್ಬ ಆಯೋಜಿಸಲಾಗಿತ್ತು. ನಾಲ್ಕು ದಿನಗಳ ಕಾಲ ನಡೆದ ಹಬ್ಬವು ಮಿನಿ ರಾಜ್ಯೋತ್ಸವದಂತೆ ನಡೆದದ್ದು ಹೆಮ್ಮೆಯ ವಿಷಯವಾಗಿದೆ ಎಂದರು.



ಈ ವೇಳೆ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥೆ ದೀಪಾ ಎಲ್., ಸಾಂಸ್ಕೃತಿಕ ವಿಭಾಗದ ವಿಶೇಷಾಧಿಕಾರಿ ನಾನಾಸಾಬ ಜಾಧವ, ಹಿರಿಯ ಉಪನ್ಯಾಸಕರಾದ ರಾಜಶ್ರೀ ಚನ್ನಮಿಲ್ಲಾ, ಡಾ.ಎಚ್.ಎನ್‌.ಚುಳಕಿ, ಪ್ರತಿಭಾ ಭಾವಿಕಟ್ಟಿ ಸೇರಿದಂತೆ ಇತರರಿದ್ದರು.

ಬಣ್ಣ ಬಣ್ಣದ ಸೀರೆಗಳಲ್ಲಿ ಕಣ್ಮಗೊಳಿಸುತ್ತಿರುವ ವಿದ್ಯಾರ್ಥಿನಿಯರು, ಪಕ್ಕಾ ಹಳ್ಳಿವೇಷದಲ್ಲಿ ಮಿಂಚುತ್ತಿರುವ ವಿದ್ಯಾರ್ಥಿಗಳು ಜೊತೆಗೆ ಕನ್ನಡ ಭಾವುಟಗಳ ಹಾರಾಟ, ಕನ್ನಡಪರ ಘೋಷಣೆಗಳ ಸದ್ದು ಸರಿಸುಮಾರು 2 ಕಿ.ಮಿ ಗೂ ಹೆಚ್ಚಿನ ವಿದ್ಯಾರ್ಥಿಗಳ ರ್ಯಾಲಿಯ ಎಲ್ಲ ದೃಶ್ಯಗಳಿಗೆ ಬೆಳಗಾವಿ ನಗರ ಸಾಕ್ಷಿಯಾಯಿತು. ಕರ್ನಾಟಕದ ಸಂಸ್ಕೃತಿ ಬಿಂಬಿಸುವ ನಾಡಹಬ್ಬದಲ್ಲಿ ಕುಂಭಮೇಳ, ಡೊಳ್ಳು ಕುಣಿತ, ಲೇಜಿಮ್, ಕೋಲಾಟ, ಕನ್ನಡಾಭಿಮಾನದ ಹಾಡುಗಳಿಗೆ ಕುಣಿಯುತ್ತಾ ವಿದ್ಯಾರ್ಥಿಗಳು ಸಂಭ್ರಮಿಸಿದರು. ನಗರದ ಬೋಗಾರವೇಸ್ ವೃತ್ತದಿಂದ ಪ್ರಾರಂಭವಾದ ರ್ಯಾಲಿಯು ಕಾಲೇಜು ರಸ್ತೆಯ ಮೂಲಕವಾಗಿ ರಾಣಿ ಚನ್ನಮ್ಮ ವೃತ್ತವನ್ನು ಸುತ್ತಿಕೊಂಡು ಮತ್ತೆ ಕಾಲೇಜಿಗೆ ಆಗಮಿಸಿ ಮುಕ್ತಾಯಗೊಂಡಿತ್ತು. ಬಳಿಕ ಕಾಲೇಜಿನ ಆವರಣದಲ್ಲಿ ಚಾಲುಕ್ಯರ ಅರಸ ಇಮ್ಮಡಿ ಪುಲಕೇಶಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮರ ಭಾವಚಿತ್ರಗಳಿಗೆ ವಿದ್ಯಾರ್ಥಿಗಳು ಹೂವಿನ ಸುರಿಮಳೆಗೈದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ