Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭತ್ತದ ಹುಲ್ಲಿನ ಬಣವೆಗೆ ಬೆಂಕಿ, ನಷ್ಟದಲ್ಲಿ ಅನ್ನದಾತರು

Advertisement
ಸಿರುಗುಪ್ಪ : ಭತ್ತದ ಹುಲ್ಲಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ನಷ್ಟವಾದ ಘಟನೆ ತೆಕ್ಕಲಕೋಟೆ ಪಟ್ಟಣ ವ್ಯಾಪ್ತಿಯ ದೇವಿನಗರ ಕ್ಯಾಂಪಿನಲ್ಲಿ ಡಿ.13 ಶನಿವಾರದಂದು ಜರುಗಿದೆ.

ನಷ್ಟದಲ್ಲಿರುವ ರೈತರಿಗೆ ಸರ್ಕಾರ ನೆರವಾಗಬೇಕು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

ದೇವಿನಗರ ಕ್ಯಾಂಪಿನ ರೈತರಾದ ವೈ.ಸರ್ವಚಲ, ಕೆ.ಸಾಯಿತೇಜ ತಂದೆ ಸುಧಾಕರ ಎಂಬ ರೈತರು ಖಾಲಿ ಜಾಗದಲ್ಲಿ ದನಕರುಗಳಿಗೆ ಸಂಗ್ರಹಿಸಿದ್ದ ಭತ್ತದ ಹುಲ್ಲಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಬಣವೆ ಹೊತ್ತಿ ಉರಿದು ಭಸ್ಮವಾಗಿದ್ದು, ಸುಮಾರು 80 ಸಾವಿರ ರೂಪಾಯಿ ನಷ್ಟವಾಗಿದೆಂದು ಅಂದಾಜಿಸಲಾಗಿದೆ.

ಈ ಬಾರಿ ಎರಡನೇ ಬೆಳೆಗೆ ನೀರಿಲ್ಲದ ಕಾರಣ ಒಂದು ವರ್ಷಕ್ಕೆ ಆಗುವಷ್ಟು ಮೇವು ಸಂಗ್ರಹಣೆ ಮಾಡಲಾಗಿತ್ತು. ಪಕ್ಕದ ಜಮೀನಿನಲ್ಲಿ ಯಾರೋ ಕುರಿ ಅಥವಾ ದನಗಾಹಿಗಳು ಬೀಡಿ ಸಿಗರೇಟ್ ಸೇದುವಾಗ ಆಕಸ್ಮಿಕವಾಗಿ ಹೊತ್ತಿದ ಬೆಂಕಿಯಿಂದ ಬಣವೆಗೆ ತಗುಲಿರಬಹುದೆಂಬ ಸಂಶಯ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಮಜರ್ ಹಸನ್ ಸಿಬ್ಬಂದಿಗಳಾದ ದೊಡ್ಡಲಿಂಗಪ್ಪ, ನಾಗರಾಜ ಲಿಂಗರಾಜ್, ಸಚಿನ್‌ಕುಮಾರ್, ಮುರುಳಿಧರ ಅವರು ತಮ್ಮ ವಾಹನದ ಜೊತೆಗೆ ಜೆ.ಸಿ.ಬಿ ಯಂತ್ರದ ಸಹಾಯದೊಂದಿಗೆ ಮೂರು ಗಂಟೆಗಳ ಕಾಲ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಆದರೆ ಬಣವೆ ಸುಟ್ಟು ಕರಕಲಾಗಿದ್ದು ಯಾವುದೇ ಪ್ರಯೋಜನಕ್ಕೆ ಬಾರದಂತಾಗಿದೆ.
ಭತ್ತದ ಹುಲ್ಲಿನ ಬಣವೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದನಕರುಗಳಿಗೆ ಮೇವಿಲ್ಲದಂತಾಗಿದ್ದು, ಸರ್ಕಾರದಿಂದ ಏನಾದರೂ ನಷ್ಟ ಪರಿಹಾರವನ್ನು ನೀಡಿದರೆ ಸಹಾಯವಾಗುತ್ತದೆ ಎಂದು ಸ್ಥಳೀಯರಾದ ಗೋಪಾಲರೆಡ್ಡಿ, ಶ್ರೀಧರ್, ಶ್ರೀಹರಿ, ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದರು.

[video width="848" height="478" mp4="http://bharathvaibhav.com/wp-content/uploads/2025/12/WhatsApp-Video-2025-12-14-at-3.55.49-PM.mp4"][/video]

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ