Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಪರಭಾರೆ *ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಸಹೋದರ ಬಂಧನ

Advertisement
ಚಾಮರಾಜನಗರ: -ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಪರಭಾರೆ ಮಾಡಿರುವ ವಿಚಾರವಾಗಿ ನಗರಸಭಾ ಸದಸ್ಯ ಹಾಗೂ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಸಂರಕ್ಷಣಾ ಸಮಿತಿ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.



ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ತಾಲೂಕು ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ಅಕ್ರಮ ಪರಭಾರೆ ಪ್ರಕರಣದಡಿ 4 ಜನ ಆರೋಪಿಗಳನ್ನು ಪಟ್ಟಣ ಠಾಣೆ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದು, ಸಂಘದ ಆಸ್ತಿ ಸಂರಕ್ಷಣೆಗಾಗಿ ಮುಂಚೂಣಿ ಹೋರಾಟಗಾರನಾಗಿದ್ದ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಸಹೋದರ ಜಯರಾಮ್ ಕೂಡ ಒಬ್ಬರು ಎಂಬುದು ಬೆಳಕಿಗೆ ಬಂದಿದೆ.

ಮೈಸೂರು ಮೂಲದ ಸೋಮಸುಂದರ್, ರಾಮಸಮುದ್ರ ಬಡಾವಣೆಯ ಜಯರಾಮ್ ಬಂಧಿತರು. ಈ ಪ್ರಕರಣದಲ್ಲಿ ಒಟ್ಟು 14 ಜನ ಆರೋಪಿಗಳಿದ್ದು, 3ನೇ ಆರೋಪಿ ಸಿ.ಎಸ್‌.ಗೋವಿಂದರಾಜು ಅವರನ್ನು ಪೊಲೀಸರು ಮೊದಲು ಬಂಧಿಸಿದರು. ಭಾನುವಾರ ಕುದೇರು ಹರೀಶ್‌ನನ್ನು ಬಂಧಿಸಲಾಗಿತ್ತು.

ಈತನ ವಿಚಾರಣೆ ವೇಳೆ ಪ್ರಕರಣದ 5ನೇ ಆರೋಪಿ ಎಚ್.ಕೆ.ಶರ್ಮ ಕುರಿತು ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಈ ಹೆಸರಿನ ವ್ಯಕ್ತಿಯೇ ಇಲ್ಲ ಎಂಬುದು ತಿಳಿದುಬಂದಿದೆ. ಮೈಸೂರಿನ ಸೋಮಸುಂದರ್ ಎಂಬುವವರೇ ಎಚ್.ಕೆ.ಶರ್ಮ ಎಂಬ ನಕಲಿ ಹೆಸರಿನಲ್ಲಿ ಸಂಘದ ಆಸ್ತಿ ಖರೀದಿ ಮಾಡಿದ್ದಾನೆ. ಈತನನ್ನು ಹರೀಶ್‌ಗೆ ಪರಿಚಯಿಸಿರುವುದು ಜಯರಾಮ್ ಎಂದು ಗೊತ್ತಾಗಿದೆ. ಈ ಇಬ್ಬರು ಆರೋಪಿಗಳನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೋರಾಟ ಸಮಿತಿ ಸದಸ್ಯನ ಸಹೋದರನು ಆರೋಪಿ:ಆದಿ ಕರ್ನಾಟಕ ಅಭಿವೃದ್ಧಿ ಸಂಘದ ಆಸ್ತಿ ವಿವಾದ ದಿನೇ ದಿನೇ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಆರೋಪಿ ಜಯರಾಮ್ ಆಸ್ತಿ ಸಂರಕ್ಷಣಾ ಸಮಿತಿ ಮುಂಚೂಣಿ ಹೋರಾಟಗಾರ, ನಗರಸಭಾ ಸದಸ್ಯ ಆರ್.ಪಿ‌.ನಂಜುಂಡಸ್ವಾಮಿ ಸಹೋದರರಾಗಿದ್ದಾರೆ.

ಮೈಸೂರಿನ ಸೋಮಸುಂದರ್ ಅವರನ್ನು ಹರೀಶ್ ಅವರಿಗೆ ಪರಿಚಯ ಮಾಡಿಕೊಟ್ಟಿರುವುದೇ ಜಯರಾಮ್ ಎಂಬುದು ತಿಳಿದು ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಆಸ್ತಿಗಳನ್ನು ಪರಭಾರೆ ಮಾಡುವಲ್ಲಿ ಇವರು ಹಿಂದಿನಿಂದಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಿದರೆ ಸತ್ಯಾಸತ್ಯತೆಗಳು ಹೊರ ಬರಲಿದೆ..

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ