Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇಡಂ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾ ದಿನಾಚರಣೆ

Advertisement
 -----------------------------------------------------------------ಲಿಂ. ಬಿ. ಮಹದೇವಪ್ಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸೇಡಂ: ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಲಿ.ಬಿ.ಮಹಾದೇವಪ್ಪನವರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಪತ್ರಿಕಾ ರಂಗ ಕವಲು ದಾರಿಯಲ್ಲಿದ್ದು, ಪತ್ರಕರ್ತರ ಹಿತ ಕಾಪಾಡುವಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಜೊತೆಗೆ ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ರಾಜ್ಯದ ಪತ್ರಕರ್ತರ ಜೊತೆಗಿದೆ ಎಂಬುದನ್ನು ಸಾಬೀತುಪಡಿಸಿದೆ.

ಪತ್ರಕರ್ತರ ವೇತನದ ಬಗ್ಗೆ ಕಾನೂನಾತ್ಮಕ ಯೋಜನೆ ರೂಪಿಸುವಲ್ಲಿ ಕೇಂದ್ರ ಮಟ್ಟದಲ್ಲಿ ಕೆಲಸವಾಗಬೇಕಿದೆ. ರಾಜ್ಯ ಸರ್ಕಾರದಿಂದ ಯಾವೆಲ್ಲಾ ಯೋಜನೆಗಳನ್ನು ಪತ್ರಕರ್ತರಿಗೆ ನೀಡಬೇಕೆನ್ನುವ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಲಿದೆ. ಇದರೊಂದಿಗೆ ಸೇಡಂ ಪತ್ರಿಕಾ ರಂಗ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ತದನಂತರ ದಿವ್ಯಸಾನಿದ್ಯ ವಹಿಸಿರುವ ಶ್ರೀ ಮಹಾಂತೇಶ್ವರ ಮಠ ತೊಟ್ನಳ್ಳಿ ಶ್ರೀಗಳಾದ ಷಡಕ್ಷರ ಬ್ರಹ್ಮ ಪೂಜ್ಯ ಶ್ರೀ ಡಾ.ತ್ರಿಮೂರ್ತಿ ಶಿವಾಚಾರ್ಯರು ಮಾತನಾಡಿದರು.

ಪತ್ರಕರ್ತ ಲಿಂ.ಬಿ. ಮಹದೇವಪ್ಪ ಪ್ರಶಸ್ತಿ ಪುರಸ್ಕೃತರು ಟಿ. ವಿ. ಶಿವಾನಂದ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ಶ್ರೀ ಶರಣಬಸವೇಶ್ವರ ಮಹಾವಿದ್ಯಾಲಯ ಕಲಬುರ್ಗಿ, ಸುಭಾಷ್ ಬಣಗಾರ ಸ್ಥಾನಿಕ ಸಂಪಾದಕರು ಸಂಯುಕ್ತ ಕರ್ನಾಟಕ ಕಲಬುರಗಿ ಮತ್ತು ದೇವಯ್ಯ ಗುತ್ತೇದಾರ್ ಸ್ಥಾನಿಕ ಸಂಪಾದಕರು ವಿಜಯ ಕರ್ನಾಟಕ ಕಲಬುರಗಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಾಬುರಾವ್ ಯಡ್ರಾಮಿ, ತಾಲೂಕ ಅಧ್ಯಕ್ಷರಾದ ಶರಣು ಮಹಾಗಾಂವ, ಪದಾಧಿಕಾರಿಗಳು, ಪತ್ರಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ