ರಾಯ್ಪುರ: ಮರಳು ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ , ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಸೇರಿದಂತೆ ಮೂವರನ್ನು ಪೆಟ್ರೋಲ್ ಸುರಿದು ಕಾರಿನೊಳಗೆ ಸುಟ್ಟು ಹತ್ಯೆ ಮಾಡಿರುವ ಘೋರ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ತಡರಾತ್ರಿ ಸೋನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಈ ಭೀಕರ ಕೃತ್ಯ ನಡೆದಿದೆ. ಮರಳು ಗಣಿ ವ್ಯವಹಾರಕ್ಕೆ ಸಂಬಂಧಿಸಿದ ವಿವಾದ ಬಗೆಹರಿಸಲು ತೆರಳಿದ್ದ ಬಿಜೆಪಿ ಮುಖಂಡ, ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಮತ್ತು ಅವರ ಸಹಚರರನ್ನು ಪೂರ್ವಯೋಜಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಭರತ್ ಸಿಂಗ್ ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರನ್ನು ಟ್ರಕ್ಗಳ ಮೂಲಕ ಮುಂದೆ ಮತ್ತು ಹಿಂದೆ ಸುತ್ತುವರಿದು ದಾರಿಗಳನ್ನು ಬಂದ್ ಮಾಡಲಾಗಿತ್ತು. ಬಳಿಕ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


