Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾವಗಡದಲ್ಲಿ ಮರಳು ಮಾಫಿಯಾ ಅಟ್ಟಹಾಸ

Advertisement
ಅಧಿಕಾರಿಗಳ ಕಣ್ಣೆದುರೇ ನದಿಗೆ ಕನ್ನ: ಪಿನಾಕಿನಿ ಮರಳು ಲೂಟಿ ಮಾಡುತ್ತಿರುವ 'ಮಹೇಂದ್ರ' ಮೃಗಗಳು!

ಪಾವಗಡ : ಶಾಂತಿ ಪ್ರಿಯ ಪಾವಗಡ ತಾಲೂಕಿನಲ್ಲಿ ಈಗ ಮರಳು ಮಾಫಿಯಾದ್ದೇ ಕಾರುಬಾರು.

ಕತ್ತಲಾಗುತ್ತಿದ್ದಂತೆ ಶುರುವಾಗುವ ಈ ಮರಳು ದಂದೆ, ಬೆಳ್ಳಂಬೆಳಗ್ಗೆ ಸೂರ್ಯ ಹುಟ್ಟುವವರೆಗೂ ಅವ್ಯಾಹತವಾಗಿ ಸಾಗುತ್ತಿದೆ. ಉತ್ತರ ಪಿನಾಕಿನಿ ನದಿಯ ಒಡಲನ್ನು ಬಗೆಯುತ್ತಿರುವ ಕಿರಾತಕರು, ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಸುಣ್ಣ ಬಳಿಯುತ್ತಿದ್ದಾರೆ.

​ಇಂದು ಮುಂಜಾನೆ 5:30ರ ಸುಮಾರಿಗೆ ಪಳವಳ್ಳಿ ರಸ್ತೆಯ ತಿಮ್ಮಾಪುರ ಗ್ರಾಮದಿಂದ ಪಾವಗಡ ಪಟ್ಟಣಕ್ಕೆ ಅಗ್ನಿಶಾಮಕ ದಳದ ಕಚೇರಿ ಮಾರ್ಗವಾಗಿ ಅಕ್ರಮ ಮರಳು ಹೊತ್ತ ಮಹೇಂದ್ರ ಟ್ರ್ಯಾಕ್ಟರ್ (ಸಂಖ್ಯೆ: KA 06 TC 8547) ರಾಜಾರೋಷವಾಗಿ ನುಗ್ಗಿದೆ.
​ಡ್ರೈವರ್ ಅತಿರೇಕ: ಒಂದು ಕೈಯಲ್ಲಿ ಸ್ಟೀರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್! ಸಾರ್ವಜನಿಕರ ಪ್ರಾಣದ ಬಗ್ಗೆ ಕಿಂಚಿತ್ತೂ ಭಯವಿಲ್ಲದೆ, ಮೊಬೈಲ್‌ನಲ್ಲಿ ಮಾತನಾಡುತ್ತಲೇ ಮರಳು ಸಾಗಿಸುತ್ತಿದ್ದ ದೃಶ್ಯ ಮೈ ನಡುಗಿಸುವಂತಿತ್ತು.


​ ಅಧಿಕಾರಿಗಳೇ, ಇದು ನಿಮ್ಮ 'ಕುಂಭಕರ್ಣ' ನಿದ್ದೆಯೇ ಅಥವಾ ಕುಮ್ಮಕ್ಕೇ?
​ಪಾವಗಡ ಪಟ್ಟಣದಲ್ಲಿ ಇರುವ ನಗರ ಪೊಲೀಸ್ ಠಾಣೆ. ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಹಾಗೂ ಭೂ ವಿಜ್ಞಾನ ಇಲಾಖೆಯ. ಮತ್ತು ಆರ್ ಟಿ ಓ ಇಲಾಖೆಯ ಅಧಿಕಾರಿಗಳಿಗೆ ಈ ದಂದೆಯ ಸಂಪೂರ್ಣ ಮಾಹಿತಿ ಇದ್ದರೂ, 'ನೋಡದವರಂತೆ' ಮೌನಕ್ಕೆ ಶರಣಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
​"ನದಿಯ ಮರಳು ಲೂಟಿಯಾಗುತ್ತಿದ್ದರೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಯಾಕೆ?

ಪ್ರತಿ ಟ್ರ್ಯಾಕ್ಟರ್‌ಗೆ ಇಂತಿಷ್ಟು ಅಂತ ಫಿಕ್ಸ್ ಆಗಿದೆಯೇ?" - ಇದು ಸಾರ್ವಜನಿಕರ ನೇರ ಪ್ರಶ್ನೆ.

​ಇಷ್ಟೆಲ್ಲಾ ಸಾಕ್ಷ್ಯಧಾರಗಳು ಕಣ್ಣಮುಂದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಸಾರ್ವಜನಿಕರೇ ಬೀದಿಗಿಳಿಯುವುದು ಖಚಿತ.ವಾಹನ ಸಂಖ್ಯೆ KA 06 TC 8547 ಮಾಲೀಕ ಹಾಗೂ ಚಾಲಕನ ವಿರುದ್ಧ ಕೂಡಲೇ FIR ದಾಖಲಾಗಲಿ.
​ಅಕ್ರಮ ಸಾಗಾಣಿಕೆಗೆ ಸಾಥ್ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ತನಿಖೆ ನಡೆಸಲಿ.

​ವರದಿ: ಶಿವಾನಂದ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್