Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚ ಭೂತಗಳಲ್ಲಿ ಲೀನರಾದ ಅಭಿನಯ ಸರಸ್ವತಿ : ಇನ್ನೂ ನೆನಪು ಮಾತ್ರ 

Advertisement
ಬೆಂಗಳೂರು : ಭಾರತೀಯ ಚಿತ್ರರಂಗದ 'ಅಭಿನಯ ಸರಸ್ವತಿ', ಹಿರಿಯ ನಟಿ ಬಿ.ಸರೋಜಾದೇವಿ ಇನ್ನೂ ನೆನಪು ಮಾತ್ರ.  ಸರೋಜಾದೇವಿ ಅವರ ಹುಟ್ಟೂರು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರನ್ನ ಮಣ್ಣು ಮಾಡಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪುತ್ರ ಗೌತಮ್ ಅಂತಿಮ ವಿಧಿ ವಿಧಾನ ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಕುಟುಂಬಸ್ಥರು, ಗಣ್ಯರು, ಅಭಿಮಾನಿಗಳು ನೆರೆದಿದ್ದರು.

ಬೆಂಗಳೂರಿನ ನಿವಾಸದಿಂದ ಇಂದು ಚನ್ನಪಟ್ಟಣಕ್ಕೆ ಮೆರವಣಿಗೆ ಮೂಲಕ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಯಿತು. ದಶಾವರ ಗ್ರಾಮದ ತೋಟದಲ್ಲಿ ಇರುವ ಸರೋಜಾದೇವಿಯವರ ತಾಯಿ ರುದ್ರಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರ ತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು.

ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ.

ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ