LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದೆಹಲಿಗೆ ಹೊರಟ ಸತೀಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಸಚಿವರ ನಡೆ

Advertisement

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವುದಾಗಿ ಬೆಳಿಗ್ಗೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

 ಇದರ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸಂಜೆ 5 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿದ್ದಾರೆ.

ನಾಗೇಂದ್ರ ಅವರ ರಾಜೀನಾಮೆ ವಿಚಾರದ ಬಿಸಿಯಾದ ಚರ್ಚೆಯ ನಡುವೆಯೇ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಬೆಳಿಗ್ಗೆ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುಂಚಿತವಾಗಿಯೇ ಸತೀಶ್ ಜಾರಕಿಹೊಳಿ ದೆಹಲಿ ತಲುಪುತ್ತಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ.

ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನದ ಬೇಡಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುನ್ನೆಲೆಯಲ್ಲಿದ್ದು, ಹೈಕಮಾಂಡ್ ಭೇಟಿಯ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಚನ್ನಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿ.17 ನೇ ವರ್ಷದ ಸಾಮಾನ್ಯ ಸಭೆಅಕ್ರಮ ಚಟುವಟಿಕೆಗಳ ವಿರುದ್ಧ ಸತತವಾಗಿ ಹೋರಾಟ ಮಾಡಲಾಗುವುದು : ಗುರುರಾಜ ನಾಗಲಾಪುರಪ್ರವಾದಿ ಮೊಹಮ್ಮದ್ ಪೈಗಂಬರ್ ರವರ ಜನ್ಮದಿನ ಅಂಗವಾಗಿ ಮುಸ್ಲಿಂ ಸಮುದಾಯದವರಿಂದ ಮೆರವಣಿಗೆಜಾಕೋವೀಕ್ - ಸೇಬೆಲೆಮ್ಕಾ ಜೋಡಿಗೆ ಸೋಲುನೇಪಾಳದಲ್ಲಿ ಭೀಕರ ಪ್ರವಾಹ : 22 ಜನರ ದುರ್ಮರಣ, 133 ಮಂದಿ ಭಾರತೀಯರು ನಾಪತ್ತೆತುಮಕೂರು ಜಿಲ್ಲೆಯ ಹಾಲಿಗೆ ಅಂತರಾಜ್ಯದಲ್ಲೂ ಬೇಡಿಕೆ : ಸಿ.ವಿ.ಮಹಲಿಂಗಯ್ಯಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಸವಾರರು ಸ್ಥಳದಲ್ಲೇ ಸಾವು ಕರ್ನಾಟಕ ಮಾದರ ಮಹಾಸಭೆಗೆ  ಸರ್ಕಾರಿ ಭೂಮಿ ಮಂಜೂರುದೆಹಲಿಗೆ ಹೊರಟ ಸತೀಶ್ ಜಾರಕಿಹೊಳಿ : ಕುತೂಹಲ ಮೂಡಿಸಿದ ಸಚಿವರ ನಡೆ ಕೊಲಂಬೊ ಟೆಸ್ಟ್ : ಗೆಲುವಿನತ್ತ ಮುಖ ಮಾಡಿದ ಭಾರತ