LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ : ಸತೀಶ್ ಜಾರಕಿಹೊಳಿ

Advertisement

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ, ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರಿಗೇನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.


ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತಿಶ್ ಜಾರಕಿಹೊಳಿ, ಸಿಎಂ ಬದಲಾವಣೆ ಅದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಸ್ವಾಮೀಜಿಗಳಿಗೆ ಏನು ಸಂಬಂಧ? ಸಮಾಜಕಟ್ಟೋದು, ಆಶಿರ್ವಾದ ಮಾಡೋದು ಶ್ರೀಗಳ ಕೆಲಸ. ಈ ರೀತಿ ಹೇಳಿಕೆಗಳನ್ನು ಸ್ವಾಮೀಜಿಗಳು ಕೊಡಬಾರದು ಎಂದಿದ್ದಾರೆ.

ಅವರ ಕಾರ್ಯವ್ಯಾಪ್ತಿ ಬೇರೆ, ನಮ್ಮ ಕಾರ್ಯವ್ಯಾಪ್ತಿ ಬೇರೆ. ಸಿಎಂ ಆಯ್ಕೆ ಮಾಡುವುದು ಶಾಸಕರು ಹಾಗೂ ಹೈಕಮಾಂಡ್. ಸಿಎಂ ಬದಲಾವಣೆ ಚರ್ಚೆಯಿಂದ ಅನವಶ್ಯಕ ಗೊಂದಲ ಸೃಷ್ಟಿಯಾಗುತ್ತಿದೆ.

ಕೆಲವರು ಬದಲಾವಣೆಯಾಗಬೇಕು ಅಂತಾರೆ, ಕೆಲವರು ಬೇಡ ಅಂತಾರೆ. ಈ ಬಗ್ಗೆ ಸಿಎಂ, ಡಿಸಿಎಂ ಅವರನ್ನೇ ಕೇಳಿ ಅವರೇ ಉತ್ತರ ಕೊಡುತ್ತಾರೆ.

ಈಗಾಗಲೇ ಉಸ್ತುವಾರಿಗಳು, ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದದರೆ. 5 ವರ್ಷಗಳ ಕಾಲ ನಮ್ಮ ಸರ್ಕಾರ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು