Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ : ಸತೀಶ್ ಜಾರಕಿಹೊಳಿ

Advertisement

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ರಂಭಾಪುರಿ ಶ್ರೀಗಳು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳಿಗೂ ರಾಜಕೀಯಕ್ಕೂ ಏನು ಸಂಬಂಧ, ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರಿಗೇನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.


ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತಿಶ್ ಜಾರಕಿಹೊಳಿ, ಸಿಎಂ ಬದಲಾವಣೆ ಅದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಸ್ವಾಮೀಜಿಗಳಿಗೆ ಏನು ಸಂಬಂಧ? ಸಮಾಜಕಟ್ಟೋದು, ಆಶಿರ್ವಾದ ಮಾಡೋದು ಶ್ರೀಗಳ ಕೆಲಸ. ಈ ರೀತಿ ಹೇಳಿಕೆಗಳನ್ನು ಸ್ವಾಮೀಜಿಗಳು ಕೊಡಬಾರದು ಎಂದಿದ್ದಾರೆ.

ಅವರ ಕಾರ್ಯವ್ಯಾಪ್ತಿ ಬೇರೆ, ನಮ್ಮ ಕಾರ್ಯವ್ಯಾಪ್ತಿ ಬೇರೆ. ಸಿಎಂ ಆಯ್ಕೆ ಮಾಡುವುದು ಶಾಸಕರು ಹಾಗೂ ಹೈಕಮಾಂಡ್. ಸಿಎಂ ಬದಲಾವಣೆ ಚರ್ಚೆಯಿಂದ ಅನವಶ್ಯಕ ಗೊಂದಲ ಸೃಷ್ಟಿಯಾಗುತ್ತಿದೆ.

ಕೆಲವರು ಬದಲಾವಣೆಯಾಗಬೇಕು ಅಂತಾರೆ, ಕೆಲವರು ಬೇಡ ಅಂತಾರೆ. ಈ ಬಗ್ಗೆ ಸಿಎಂ, ಡಿಸಿಎಂ ಅವರನ್ನೇ ಕೇಳಿ ಅವರೇ ಉತ್ತರ ಕೊಡುತ್ತಾರೆ.

ಈಗಾಗಲೇ ಉಸ್ತುವಾರಿಗಳು, ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದದರೆ. 5 ವರ್ಷಗಳ ಕಾಲ ನಮ್ಮ ಸರ್ಕಾರ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್