Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ : ಸತೀಶ್ ಜಾರಕಿಹೊಳಿ 

Advertisement
ವಿಜಯನಗರ : ಈಗಾಗಲೇ ರಾಜ್ಯ ರಾಜಕಾರಣದಲ್ಲಿ ನವೆಂಬರ್​​​ಗೆ ಸಿಎಂ ಬದಲಾವಣೆ ಆಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯೂ ಫಿಕ್ಸ್ ಎಂಬ ಮಾತು ಕೇಳಿಬರುತ್ತಿವೆ.

ಇನ್ನೊಂದೆಡೆ ಸಿಎಂ ಬದಲಾವಣೆ ಚರ್ಚೆ ವಿಚಾರ ಬಂದಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ದಲಿತ ಸಿಎಂ ಕೂಗು ಮುನ್ನೆಲೆಗೆ ತಂದು ಬಿಡುವ ಚಾಣಾಕ್ಷ ಎಂದು ಬಿಜೆಪಿ ಜರಿದಿದೆ.

ನವೆಂಬರ್ ವರೆಗೆ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದ್ದದ್ದು ಗೊತ್ತೇ ಇದೆ.

ಇದೀಗ ಸಿಎಂ ಬಣದ ನಾಯಕರಾದ ಸಚಿವ ಸತೀಶ್ ಜಾರಕಿಹೊಳ್ಳಿ ಅವರು ಸಿಎಂ ಬದಲವಾವಣೆ ವಿಷಯದ ಕುರಿತಾಗಿ ಹೊಸಪೇಟೆಯಲ್ಲಿ ಮಗದೊಮ್ಮೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ.

ಹೀಗಿರುವಾಗ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆಯೇ ಎಂದು ಪ್ರಶ್ನೆ ಕೇಳಿದರೆ ಏನು ಹೇಳಲಿ ಎಂದು ಪತ್ರಕರ್ತರಿಗೆ ಮರುಪ್ರಶ್ನೆ ಹಾಕಿದರು.

ಸಿಎಂ ಬದಲಾಗ್ತಾರೆ ಎಂದು ನಾವು ಇಲ್ಲಿ ಕುಳಿತು ಹೇಳಲು ಆಗಲ್ಲ, ಬೆಂಗಳೂರಿಗೆ ಬಂದು ಕೇಳಿ ಎಂದರಲ್ಲದೇ, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂಬ ಚರ್ಚೆಯೇ ಮುಗಿದು ಹೋಗಿರುವ ಅಧ್ಯಾಯ. ಈ ಬಗ್ಗೆ ಮುಂದೆ ಯೋಚಿಸಿ ಮಾತನಾಡುವುದು ಸೂಕ್ತ ಎಂದರು.

ಇನ್ನು ದಲಿತ ಸಚಿವರಾಗಲಿ, ಶಾಸಕರಾಗಿ ಸಭೆ ಸೇರುವುದು ಸಿಎಂ ಬದಲಾವಣೆ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಂದೆಯೂ ನಾವು ಸಭೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾವ ಸರ್ಕಾರ ಅಥವಾ ಹೈಕಮಾಂಡ್​​ ಮುಂದಿಲ್ಲ. ವಿಶ್ವನಾಥ್‌ ಅವರಿಗೆ ಕಾಂಗ್ರೆಸ್‌‍ ಹೈಕಮಾಂಡ್‌ ಯಾವಾಗ ಆ ವಿಷಯ ತಿಳಿಸಿದೆಯೋ ನನಗೆ ಕಿಂಚಿತ್ತೂ ಗೊತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಆಗಿಯೇ ಮುಂದುವರಿಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ