Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಕಡೆ ಬೆಟ್ಟು ಮಾಡುವುದು ಸರಿಯಲ್ಲ : ಸತೀಶ್ ಜಾರಕಿಹೊಳಿ 

Advertisement
ಮೈಸೂರು : ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಗೆ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲಿ ಖಂಡನೆ ವ್ಯಕ್ತಪಡಿಸಿದ್ದು, ಉಗ್ರರ ದಾಳಿಗೆ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.

ಈ ಬಗ್ಗೆ ಮಾತನಾಡಿದ ಅವರು, ಹಿಂದುಗಳನ್ನೇ ಟಾರ್ಗೆಟ್ ಮಾಡಿ ಈ ಹತ್ಯೆ ಮಾಡಲಾಗಿದೆ. ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರ ನಡೆಸುತ್ತಿರಲಿ, ಈ ಸಂದರ್ಭದಲ್ಲಿ ತಮ್ಮ ಸರ್ಕಾರ ಅದರ ಜೊತೆ ನಿಲ್ಲುತ್ತದೆ, ರಾಜ್ಯದ ಎಲ್ಲಾ ಪಕ್ಷದ ನಾಯಕರು ಇದಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದರು.

ಹಿಂದೂಗಳನ್ನೇ ಗುರಿಯಾಗಿಸಿ ದಾಳಿ ನಡೆಸಿದ ಉಗ್ರರು ಯಾರು, ಎಲ್ಲಿಂದ ಬಂದಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಅನ್ನೋದನ್ನು ಕೇಂದ್ರ ಸರ್ಕಾರ ಪತ್ತೆ ಮಾಡುತ್ತದೆ, ಕ್ರಮ ತೆಗೆದುಕೊಳ್ಳುತ್ತದೆ. ಕೇಂದ್ರದ ಜೊತೆ ಸದಾ ನಾವು ಇರುತ್ತೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.


ಕೆಲವರು ಈ ದಾಳಿಗೆ ಕೇಂದ್ರ ಸರ್ಕಾರನೇ ಕಾರಣ ಎಂದು ಹೇಳುತ್ತಿದ್ದಾರೆ. ಅದೆಲ್ಲ ಅವರ ವೈಯಕ್ತಿಕ, ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎರಡ್ಮೂರು ದಿನಗಳಲ್ಲಿ ವರದಿ ಬರಬಹುದು ಆಗ ದಾಳಿಯ ಹಿಂದೆ ಯಾರಿದ್ದಾರೆ ಅಂತ ಗೊತ್ತಾಗುತ್ತದೆ, ಹಾಗಂತ ಕೇಂದ್ರದ ಕಡೆ ಬೆಟ್ಟು ಮಾಡುವುದು ಸರಿಯಲ್ಲ ಎಂದು ಜಾರಕಿಹೊಳಿ ಹೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್