Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ನಾಯಕರು ಸಭೆ ಸೇರುವುದು, ಸಮಾವೇಶ ಮಾಡಬಾರದಾ..? : ಸತೀಶ್ ಜಾರಕಿಹೊಳಿ ಪ್ರಶ್ನೆ 

Advertisement
ದಾವಣಗೆರೆ : ಅಭಿಮಾನಿಗಳು ತಮ್ಮ ನಾಯಕ ಸಿಎಂ ಆಗಲಿ ಎನ್ನುವುದು ಸಾಮಾನ್ಯವಾಗಿದ್ದು, ಎಲ್ಲರ ಬಗ್ಗೆಯೂ ಇದು ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ, ಮತ್ತೆ ದಲಿತ ಸಮಾವೇಶ ಆಯೋಜನೆ ಚರ್ಚೆ ಬಗ್ಗೆ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅಗತ್ಯಬಿದ್ದರೆ ದಲಿತ ಸಮಾವೇಶ ಮಾಡುತ್ತೇವೆ.

ಸಚಿವ ಜಿ.ಪರಮೇಶ್ವರ್ ಅವರೇ ಲೀಡ್ ಮಾಡುತ್ತಾರೆ. ಅವರೇ ಹೆಡ್. ದಲಿತ ಸಮಾವೇಶದ ಕುರಿತಾಗಿ ಹೆಚ್ಚಾಗಿ ಪರಮೇಶ್ವರ್ ಬಳಿ ಕೇಳಿ. ಅದರ ರೂಪುರೇಷೆ ಕುರಿತು ಅವರ ಬಳಿ ಕೇಳಿದರೆ ತಿಳಿಸುತ್ತಾರೆ. ಸಮಾವೇಶವು ಅವರ ನೇತೃತ್ವದಲ್ಲೇ ಆಗಬೇಕು ಎಂದರು.

ಸದ್ಯಕ್ಕೆ ಸಿಎಂ ಬದಲಾವಣೆ ವಿಚಾರ ಇಲ್ಲ. ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದ ಅವರು, ದಲಿತ ನಾಯಕರು ಸಭೆ ಸೇರುವುದು, ಸಮಾವೇಶ ಮಾಡಬಾರದಾ ಎಂದು ಪ್ರಶ್ನಿಸಿದರು.

ಇನ್ನು ಇದೇ ವೇಳೆ ದೆಹಲಿ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿ, ಇವಿಎಂ ಬಗ್ಗೆ ಸಾಕಷ್ಟು ಅನುಮಾನಗಳು ಇವೆ. ಅದರ ಕುರಿತು ಚರ್ಚೆ ಆಗಬೇಕು.

ಇದಲ್ಲದೇ ಸಿದ್ದರಾಮಯ್ಯ ಅವರು ಸಿಎಂ ಆಗಿ ಮಂಡಿಸಲಿರುವ ಕೊನೆಯ ಬಜೆಟ್ ಎಂಬ ಬಿಜೆಪಿ ಅವರ ಮಾತಿಗೂ ಕೌಂಟರ್ ನೀಡಿರುವ ಸತೀಶ್ ಅವರು, ಅದನ್ನು ಬಿಜೆಪಿಯವರ ಬಳಿಯೇ ಕೇಳಿ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುವುದು ಖಚಿತ ಎಂಬುವುದು ನಮಗೆ ಗೊತ್ತಿದೆ ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್