Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇಶಭಕ್ತಿ ಗಾಯನದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಸೌರಭ ಕಾನ್ವೆಂಟ್ ವಿದ್ಯಾರ್ಥಿಗಳು

Advertisement
ತುರುವೇಕೆರೆ: ತುಮಕೂರು ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕಬ್, ಬುಲ್ ಬುಲ್ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ತಾಲೂಕಿನ ಮಾಯಸಂದ್ರದ ಸೌರಭ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರಿನ ರೇಣುಕಾ ವಿದ್ಯಾಪೀಠ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕಬ್, ಬುಲ್ ಬುಲ್ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಸೌರಭ ಕಾನ್ವೆಂಟಿನ ಸ್ಕೌಟ್ಸ್ ವಿಭಾಗದಲ್ಲಿ ನೂತನ್ ಕೆ.ವೈ, ಪರಿಣಯ್ ಸಿ.ಎಸ್, ಜಯಚಂದ್ರ ಟಿ.ಡಿ., ಶಶಾಂಕ್ ಎಂ, ಮೊಹಮ್ಮದ್ ಆಹಿಲ್, ಮೊಹಮ್ಮದ್ ಅಬೂಜರ್, ಮೊಹಮ್ಮದ್ ಅಫ್ನಾನ್, ಮೊಹಮದ್ ಅಯಾನ್ ತಂಡ ಹಾಗೂ ಕಬ್ ವಿಭಾಗದ ಅಬ್ದುಲ್ ವಹಾಬ್ ಅಫ್ನಾನ್, ಚೇತನ್ ಎಂ.ಜೆ, ಮೋಹನ್ ಯಾದವ್, ಸಫೀರ್, ಲೋಹಿತ್, ಮಹಮ್ಮದ್ ಅಜಾನ್, ಪವನ್ ಪಿ. ವಿದ್ಯಾರ್ಥಿಗಳನ್ನೊಳಗೊಂಡ ತಂಡಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಭಾಗವಾಗಿರುವ ಬೆಂಗಳೂರು ವಿಭಾಗಿಯ ಮಟ್ಟಕ್ಕÉ ಆಯ್ಕೆಯಾಗಿರುತ್ತಾರÉ.

 



ಉಳಿದಂತೆ ಗೈಡ್ಸ್ ವಿಭಾಗದಲ್ಲಿ ಶ್ರೇಯ ಕೆ.ಸಿ., ನೂರ್ ಸಾದಿಯಾ, ಖುಷಿ ಮಾಯಸಂದ್ರ, ಖುಷಿ ಎಂ, ನಿಧಿಶ್ರೀ ಯು, ಮಾನ್ಯ ಎಸ್, ಜಸ್ಮಿತಾಲಕ್ಷಿö್ಮÃ ತಂಡ ತೃತಿಯ ಸ್ಥಾನ ಪಡೆದರೆ, ಬುಲ್ ಬುಲ್ ವಿಭಾಗದಲ್ಲಿ ಪೂರ್ವಿಕ ಟಿ.ಎಂ, ರೋಹಿಣಿ, ಪೂರ್ಣಿಮಾ, ವರ್ಷಿಣಿ, ಮರಿಯ ಫಾತಿಮಾ, ದೀಕ್ಷಾ ಜೆ.ಪಿ. ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇದಲ್ಲದೆ ಶಿಕ್ಷಕರ ವಿಭಾಗದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದಂತಹ ಮುನಿರಾಜು ಆರ್. (ಪ್ರೀಎ.ಎಲ್.ಟಿ ಸ್ಕೌಟ್ ಮಾಸ್ಟರ್) ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕÉ ಆಯ್ಕೆಯಾಗಿರುತ್ತಾರÉ.

ವಿಭಾಗೀಯ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು, ಶಿಕ್ಷಕರನ್ನು ಅಭಿನಂದಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಕಲ್ಪನಾ ಮುನಿರಾಜು, ಸೌರಭ ಕಾನ್ವೆಂಟ್ ಶಾಲೆಯು ಅಪ್ಪಟ ಕನ್ನಡ ಶಾಲೆಯಾಗಿ ತಾಲೂಕಿನಲ್ಲಿ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದಲ್ಲಿನ ಶಿಕ್ಷಣ ಮಾತ್ರವಲ್ಲದೆ ಗುಣಾತ್ಮಕ ಹಾಗೂ ಮೌಲ್ಯಯುತ ಶಿಕ್ಷಣವನ್ನು ಶಾಲೆಯಲ್ಲಿ ನೀಡಲಾಗುತ್ತಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ, ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ. ಮಕ್ಕಳಲ್ಲಿ ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಮೌಲ್ಯಗಳನ್ನು, ದೇಶಪ್ರೇಮವನ್ನು ಮೂಡಿಸುವಂತಹ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತಿದೆ. ಮಕ್ಕಳ ಸರ್ವತೋಮುಖ ಪ್ರಗತಿ ಶಾಲೆಯ ಗುರಿಯಾಗಿದೆ ಎಂದರು.



ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದಂತಹ ಎಲ್ಲಾ ವಿದ್ಯಾರ್ಥಿಗಳಿಗೆ ತುರುವೇಕೆರÉ ತಾಲೂಕಿನ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕಮಲ್ ರಾಜು, ತುಮಕೂರು ಜಿಲ್ಲಾ ಸಂಘಟನಾ ಅಧಿಕಾರಿ ನವೀನ್, ಶಿಕ್ಷಕರಾದ ನುಸರತ್ ಜಬಿನ್, ಲಲಿತಾ ಭಟ್, ಗೀತಾಮಣಿ, ಪ್ರಭ, ಸೌಮ್ಯ, ನಮಿರಾ ಖಾನಮ್, ವಾಹನ ಮಾಲೀಕರಾದ ಶಶಿಕುಮಾರ್, ಜಗದೀಶ್, ದಿನೇಶ್, ಅಝದ್ ಖಾನ್ ಹಾಗೂ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ