Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜು.30 ಕ್ಕೆ ಎಸ್ಸಿ, ಎಸ್ಟಿ ಹಿತರಕ್ಷಣಾ ಸಭೆ : ರಮೇಶ್ ನಾಯಕ್

Advertisement

ತುರುವೇಕೆರೆ: ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಭೆಯನ್ನು  ಜುಲೈ 30 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ವಿರಕ್ತ ಮಠ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ನಾಯಕ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜುಲೈ 17 ರಂದು ಸಭೆ ಏರ್ಪಡಿಸಿದ್ದು ತುಮಕೂರಿನಲ್ಲಿ ಉಪಮುಖ್ಯಮಂತ್ರಿಗಳ ಸಭೆ ಹಿನ್ನೆಲೆ ಜುಲೈ 23 ಕ್ಕೆ ಮುಂದೂಡಲಾಗಿತ್ತು.  ಜುಲೈ 23 ರಂದು ತುಮಕೂರಿನಲ್ಲಿ ಪೊಲೀಸ್ ಅಧೀಕ್ಷಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಭೆ ಕರೆದಿರುವ ಹಿನ್ನೆಲೆ ಎರಡನೇ ಬಾರಿಗೆ ತಾಲೂಕು ಮಟ್ಟದ ಹಿತರಕ್ಷಣಾ ಸಭೆಯನ್ನು ಮುಂದೂಡಲಾಗುತ್ತಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಭೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕುಂದು ಕೊರತೆಗಳನ್ನು ಆಲಿಸುವ ಸಮಸ್ಯೆ ಪರಿಹರಿಸುವ ಸಭೆಯಾಗಿರುವುದರಿಂದ ಬಗರ್ ಹುಕುಂ, ಅಟ್ರಾಸಿಟಿ ಪ್ರಕರಣ, ಜಮೀನು ವಿವಾದ, ಅಂತರ್ಜಾತಿ ವಿವಾಹ ಸೇರಿದಂತೆ ವಿವಿಧ ವಿಷಯಕ್ಕೆ ಸಂಬಂಧಿಸಿದಂತೆ ಕುಂದುಕೊರತೆ ಅರ್ಜಿ ಸಲ್ಲಿಸುವವರು ಜುಲೈ 24 ರೊಳಗೆ ತಮ್ಮ ಅಹವಾಲನ್ನು ಕಛೇರಿಗೆ ಸಲ್ಲಿಸಬೇಕೆಂದರು.

ಜುಲೈ 30 ರಂದು ನಡೆಯುವ ಸಭೆಯಲ್ಲಿ ತಹಸೀಲ್ದಾರ್ ಕುಂಇ ಅಹಮದ್, ಇಒ ಅನಂತರಾಜು, ಪಪಂ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಪಂ ಪಿಡಿಒಗಳು ಉಪಸ್ಥಿತರಿರಲಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಬಾಂದವರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ವರದಿ: ಗಿರೀಶ್ ಕೆ ಭಟ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST