Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Advertisement

  • ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣಾ


 

  • ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2024-25 ನೆಯ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು. ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚಿಹ್ನೆಗಳ ಹಂಚಿಕೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ ಎಲ್ಲ ಹಂತಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.


  • ವಿದ್ಯಾರ್ಥಿಗಳನ್ನೇ ಚುನಾವಣಾ ಸಿಬ್ಬಂದಿಯನ್ನಾಗಿಸಿ ತರಬೇತಿ ನೀಡಿ ಕರ್ತವ್ಯ ನಿರ್ವಹಿಸುವಂತೆ ತಯಾರಿ ಮಾಡಲಾಗಿತ್ತು. ಪಿಆರ್‌ಒ ಪೃಥ್ವಿ ಗರಗದ, ಎಪಿಆರ್‌ಒ ಸುಶ್ಮಿತಾ ಸೊಗಲದ, ಪಿಒ ಸ್ಪೂರ್ತಿ ಕುಲಕರ್ಣಿ, ಲಕ್ಷ್ಮೀ ಇಂಚಲ, ಪೋಲಿಸ್ ಸಿಬ್ಬಂದಿಗಳಾಗಿ ಮಲ್ಲಪ್ಪ ದಳವಾಯಿ, ಪ್ರೀತಂ ಸೂರ್ಯವಂಶಿ, ಸೀಮಾ ಹೊಸೂರ, ಸುಕನ್ಯಾ ಹೊಸೂರ, ಚುನಾವಣಾ ಏಜೆಂಟ್‌ರಾಗಿ ಬಸವರಾಜ ಗರಗದ, ಬಸವರಾಜ ಯರಗೊಪ್ಪ, ಲಕ್ಷ್ಮೀ ಶೀಗಿಹಳ್ಳಿ, ಲಕ್ಷ್ಮೀ ಶೀಗಿಹಳ್ಳಿಮಠ ಆಸಕ್ತಿ ಹಾಗೂ ಹುರುಪಿನಿಂದ ಕಾರ್ಯ ನಿರ್ವಹಿಸಿದರು.


ಒಟ್ಟು 9 ಸ್ಥಾನಗಳಿಗೆ 28 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರಿಗೂ ಮತ ಚಲಾಯಿಸುವ ಅವಕಾಶ ನೀಡಲಾಗಿತ್ತು. ಒಟ್ಟೂ ಶೇ. 88.52 ರಷ್ಟು ಮತದಾನವಾಯಿತು. 

  • ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿತ್ತು. ಫಲಿತಾಂಶ ಹೊರಬಿದ್ದಂತೆ ಗೆದ್ದ ಮಕ್ಕಳು ಖುಷಿಯಿಂದ ಸಂಭ್ರಮಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಗ್ರಾಮ ಪಂಚಾಯತಿ ಸದಸ್ಯರಾದ ಮಹಾಂತೇಶ ಹುಣಶೀಕಟ್ಟಿ, ರಾಜಶೇಖರ ದೊಡವಾಡ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್.ಗುರುನಗೌಡರ, ಎಸ್.ವಿ.ಬಳಿಗಾರ, ಆರ್.ಸಿ.ಸೊರಟೂರ, ಎಚ್.ವಿ.ಪುರಾಣಿಕ, ಕುಮಾರ ಯರಗಂಬಳಿಮಠ, ಪ್ರಾಥಮಿಕ ಶಾಲೆಯ ಗುರುಗಳಾದ ದಾದಾಪೀರ ಬಾಗೇವಾಡಿ, ವಿ.ಎಂ.ಕುರಿ, ಕೃಷ್ಣೇಗೌಡ, ಶೋಭಾ ರೊಟ್ಟಿ, ಮುನವಳ್ಳಿಮಠ, ತಿಪ್ಪಣ್ಣ ಮಾದರ, ರುದ್ರಪ್ಪ ಚಚಡಿ, ಪ್ರಶಿಕ್ಷಣಾರ್ಥಿ ಪವಿತ್ರಾ ಸೊಗಲದ, ಅಡುಗೆ ಸಹಾಯಕರಾದ ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ, ವೀಣಾ ಶೀಗಿಹಳ್ಳಿ, ಪಾರವ್ವ ದಳವಾಯಿ, ಗಂಗವ್ವ ದೊಡವಾಡ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಚುನಾವಣಾಧಿಕಾರಿಯಾಗಿ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ, ಸಹಾಯಕ ಚುನಾವಣಾಧಿಕಾರಿಯಾಗಿ ಚುನಾವಣಾ ಸಾಕ್ಷರತಾ ಕ್ಲಬ್ ನೋಡಲ್ ಶಿಕ್ಷಕಿಯರಾದ ಮಂಜುಳಾ ಕಾಳಿ ಕಾರ್ಯ ನಿರ್ವಹಿಸಿದರು.



ವರದಿ: ಎನ್ ಆರ್ ತಕಾಯಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ