Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳಿಗೆ  SCP/TSP ಹಣ ಬಳಕೆ ಮಾಡಿದ್ರೇ ತಪ್ಪೇನು : ಸಚಿವ ತಂಗಡಗಿ 

Advertisement
ಕೊಪ್ಪಳ : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಗೆ SCP/TSP ಹಣ ಬಳಕೆ ಮಾಡುತ್ತಿದೆ ಎಂದು ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 5 ರಂದು ಪ್ರತಿಭಟನೆ ಹಮ್ಮಿಕೊಂಡಿದೆ ಇದರ ಬೆನ್ನಲ್ಲೆ ಸಚಿವ ಶಿವರಾಜ್ ತಂಗಡಗಿ ಗ್ಯಾರೆಂಟಿ ಯೋಜನೆಗಳಿಗೆ ಈ ಹಣ ಬಳಸಿದರೆ ತಪ್ಪೇನು?ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಈ ಕುರಿತು ಸದನದಲ್ಲಿ ಕೇಳಲಿ ಉತ್ತರಿಸುತ್ತೇವೆ. ಗ್ಯಾರಂಟಿಗಳಿಗೆ ಎಸ್‌ಸಿಇಪಿ-ಟಿಎಸ್‌ಪಿ ಅನುದಾನ ವರ್ಗಾವಣೆ ಆರೋಪ‌ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಎಂದು ವಾಗ್ದಾಳಿ ಮಾಡಿದ್ದಾರೆ.


ಅನುದಾನ ಬಳಕೆ ಮಾಡಿದ್ದೀವಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿ ಅವರು ಕೇಳಲಿ. ನಾವು ಉತ್ತರ ಕೊಡಲು ಸಿದ್ದರಾಗಿದ್ದೇವೆ. ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಅವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಕುಟುಕಿದ್ದಾರೆ.


ಇನ್ನು ಪರಿಶಿಷ್ಟ ಜಾತಿ/ಪ.ಪಂ. ಸಮುದಾಯಕ್ಕೆ ಹಣ ಮೀಸಲಿಡುವ ಯೋಜನೆಯನ್ನು ಸಿದ್ದರಾಮಯ್ಯ ಅವರೇ ಜಾರಿಗೆ ತಂದಿದ್ದು. ಬಿಜೆಪಿಯವರೇನಾದರೂ ಈ ಯೋಜನೆ ಮಾಡಿದ್ರಾ? ನಾವು ಬೇರೆ ಸಮುದಾಯಕ್ಕೆ ಹಣ ಬಳಕೆ ಮಾಡುತ್ತಿಲ್ಲ. ದಲಿತ ಸಮುದಾಯಕ್ಕೆ ಹಣ ಕೊಡುತ್ತಿದ್ದೇವೆ ಅಲ್ವಾ ಎಂದು ಸಚಿವರ ಹೇಳಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್