Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಸ್ವ-ಉದ್ಯೋಗ ತರಬೇತಿ ಪಡೆದು ಸ್ವಾವಲಂಬನೆಯಾಗಿ ಬದುಕಿ'

Advertisement
ಬೈಲಹೊಂಗಲ: ತಾಲೂಕಿನ ಅಮಟೂರು ಕಾರ್ಯಕ್ಷೇತ್ರ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಶ್ರೀ ಭಾರತಾಂಬೆ ಜ್ಞಾನವಿಕಾಸ ಕೇಂದ್ರದಲ್ಲಿ ಗುರುವಾರದಂದು ಸ್ವ ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನು ಶ್ರೀಮತಿ ಸಂಗೀತ ಸೋಗಿನಮನಿ, ಉದ್ಘಾಟಕರಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಶ್ರೀಮತಿ ನೀಲವ್ವ ಆನಿಕಿವಿ ಭಾಗವಹಿಸಿದ್ದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಆರ್ ಎಸ್ ಟಿ ಉಪನ್ಯಾಸಕರಾದ ಶ್ರೀಮತಿ ರಾಜೇಶ್ವರಿ ಹಾಗೂ ಬೈಲಹೊಂಗಲ ತಾಲೂಕಿನ ಜ್ಞಾನ ವಿಕಾಸದ ಸಮನ್ವಧಿಕಾರಿ ಶ್ರೀಮತಿ ಶೈಲಾ ಜೆ ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಪ್ರಾಸ್ತಾವಿಕವಾಗಿ ತಾಲೂಕಿನ ಸಮನ್ವಯಾಧಿಕಾರಿ ಶ್ರೀಮತಿ ಶೈಲಾಜೆ ಮಾತನಾಡಿ ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ನಮಗೆಲ್ಲಾ ಹತ್ತು ಹಲವು ಕಾರ್ಯಕ್ರಮಗಳನ್ನು ಲಭಿಸುತ್ತಿದ್ದು ಮಾತೃಶ್ರೀ ಅಮ್ಮನವರ ಹಾಗೂ ಪೂಜ್ಯ ಖಾವಂದರ ಆಶಯದಂತೆ ಮಹಿಳೆಯರ ಸಬಲೀಕರ ಣಕ್ಕಾಗಿ. ಮಹಿಳೆಯರು ಸ್ವಾವಲಂಬಿ ಯಾಗಿ, ಕುಟುಂಬದ ಆರ್ಥಿಕತೆಯಲ್ಲಿ ಸಹಕರಿಸಲು ಸ್ವ-ಉದ್ಯೋಗ ತರಬೇತಿ ಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರ ಸಲುವಾಗಿ ನೀಡುವ ತರಬೇತಿಯನ್ನು ಅಚ್ಚುಕಟ್ಟಾಗಿ ನೋಡಿಕೊಂಡು ಮುಂಬರುವ ದಿನಗಳಲ್ಲಿ ನೀವು ನಿಮ್ಮ ಜೀವನದಲ್ಲಿ ಒಂದು ಸ್ವ ಉದ್ಯೋಗ ವಾಗಿ ಪರಿವರ್ತಿಸಿಕೊಳ್ಳಬೇಕು.

ಹಲವಾರು ತರಬೇತಿ ಆಯೋಜನೆ ಮಾಡುತ್ತಿದ್ದು, ಪುರುಷರಿಗೂ ಮತ್ತು ಮಹಿಳೆಯರಿಗೆ ಪೂರಕವಾದ ಉಚಿತ ತರಬೇತಿಗಳನ್ನು ಪಡೆದುಕೊಳ್ಳಿರಿ ಎಂದು ಹೇಳಿದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ರಾಜೇಶ್ವರಿ ದೇವಲಾಪುರ ಮಾತನಾಡಿ ಅವರು ಸ್ವ ಉದ್ಯೋಗಗಳನ್ನು ಹೇಗೆ ಕೈಗೊಳ್ಳುವುದು, ಎದುರಾಗುವ ಸಮಸ್ಯೆಗಳು, ಸವಾಲುಗಳು, 43 ವಿಧದ ರೀತಿಯ ಸ್ವ ಉದ್ಯೋಗಗಳ ಕುರಿತು ಮಾಹಿತಿ, ಹಾಗೂ ತರಬೇತಿ ಸಂಸ್ಥೆಯಲ್ಲಿ ನೀಡುವಂತಹ ವಿವಿಧ ರೀತಿಯ ಉದ್ಯೋಗಗಳ ತರಬೇತಿ ಕುರಿತು ಮಾಹಿತಿ ನೀಡಿದರು.ಹಾಗೂ ತರಬೇತಿ ಪಡೆದುಕೊಂಡು ಪ್ರತಿ ತರಬೇತಿಯ ಸರ್ಟಿಫಿಕೇಟ್ ಅನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಸೇವಾಪ್ರತಿನಿದಿ ಕುಮಾರಿ ಐಶ್ವರ್ಯ, ಶ್ರೀ ಶೈಲ್ ಚಿನಿವಾಲರ ಸ್ವಾಗತ. ರತ್ನ ವಂದನೆ ಲಕ್ಷ್ಮಿ ನೆರವೇರಿಸಿದರು. ಈ ಸಂದರ್ಭ ಕೇಂದ್ರದ ಸರ್ವ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ: ದುಂಡಪ್ಪ ಹೂಲಿ ಮಲ್ಲಮ್ಮನ ಬೆಳವಡಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ