Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ 

Advertisement

ಬೆಂಗಳೂರು : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ನಿಧನರಾಗಿದ್ದಾರೆ. ಕಳೆದ ಕೆಲಕಾಲದಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಳೆದ 1 ತಿಂಗಳಿನಿಂದ ಅನಾರೋಗ್ಯಕ್ಕೆ ಹಾಗೂ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

1953ರಲ್ಲಿ ಆರ್‌ಎಸ್‌ಎಸ್‌ ಸೇರುವ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ ಅವರು, 1970ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದರು.

ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ ಪ್ರಮುಖ ನಾಯಕರಲ್ಲಿ ಇವರೊಬ್ಬರು. ಅಂದಿನ ಭಾರತೀಯ ಜನಸಂಘದ ವತಿಯಿಂದ ಬೆಂಗಳೂರು ನಗರ ನಿಗಮಕ್ಕೆ (ಬಿಸಿಸಿ) ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ಇವರದ್ದು.

ಪ್ರಭಾವಿ ನಾಯಕ: ಇವರು ಸತತ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂದಹಳ್ಳಿ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿಯೊಂದಿಗೆ ಆಷಾಢ ಅಮಾವಾಸ್ಯೆ ವಿಶೇಷೋತ್ಸವ ಮುಖ್ಯಮಂತ್ರಿ ಪ್ರಧಾನ ಸಲಹೆಗಾರರನ್ನಾಗಿ ಜಿ.ಸಿ. ಚಂದ್ರಶೇಖರ್ ನೇಮಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ ​ಮತದಾನ ನಮ್ಮ ಹಕ್ಕು - ನಮ್ಮ ಕರ್ತವ್ಯ: ಶಹಾಪುರದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಂದ ಭರ್ಜರಿ ಜಾಗೃತಿ ಜಾಥಾಗೋಕಾಕ್ ದಿಂದ ಬೆಳಗಾವಿ ಬಾಯಪಾಸ್ ಹುದಲಿ ಸಮೀಪದ  ರೈಲ್ವೇ ಕಾಮಗಾರಿಯನ್ನು ಪರಿಶೀಲಿಸಿದ ಶ್ರೀ ಸನ್ಮಾನ್ಯ ಜಾರಕಿಹೊಳಿಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಜಾಗೃತಿ ಜಾಥಾ! ಡಾ. ಅಯ್ಯನಗೌಡ  ಗೃಹಲಕ್ಷ್ಮಿಗಳ ಗಮನಕ್ಕೆ : ಇ-ಕೆವೈಸಿ ಅಪ್ಡೇಟ್ ಮಾಡಿಸುವುದು ಸುಳ್ಳು ಸುದ್ದಿ : ರಾಜ್ಯ ಸರ್ಕಾರ ಸೂಚನೆ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ ನೇಮಕಾತಿ ರದ್ದು ವಿಶ್ವಕಪ್ ಫುಟ್‌ಬಾಲ್: ಸೆಮಿಫೈನಲ್ ವೇದಿಕೆ ಸಜ್ಜು