Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇವಾ ನಿವೃತಿ ಸಮಾರಂಭ ಶ್ರೀ ಆರ್. ಎನ್. ಹುರಳಿ

Advertisement
ರೋಣ: ಸೇವಾನಿರತ ವೃತ್ತಿಯಲ್ಲಿ ನಿವೃತ್ತಿ ಅನಿವಾರ್ಯ ಆದರೆ ಕರ್ತವ್ಯದಲ್ಲಿ ಶಿಸ್ತು ಶೃದ್ದೆ ನಿಷ್ಠೆ ಪ್ರಮಾಣಿಕತೆ ಸಮಯ ಪಾಲನೆ ಹೊಂದಿರುವ ವ್ಯಕ್ತಿಗೆ ಇಡೀ ಮನುಕುಲವೇ ಗೌರವ ನೀಡುತ್ತದೆ.ಎನ್ನುವುದಕ್ಕೆ ಇಂದಿನ ಸಮಾರಂಭ ಸಾಕ್ಷಿಯಾಗಿದೆ ಎಂದು ತಾಲೂಕ ದಂಡಾಧಿಕಾರಿ ನಾಗರಾಜ್ ಕೆ ಹೇಳಿದರು.



ಕ್ಷೇತ್ರ ಶಿಕ್ಷಣ ಅಧಿಕಾರಿಯಾಗಿ ಶಿಕ್ಷಣ ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ವಯೋ ನಿವೃತ್ತಿ ಹೊಂದಿರುವ ರುದ್ರಪ್ಪ ಹುರಳಿ ಇವರಿಗೆ ನಗರದ ಗುರು ಭವನದಲ್ಲಿ ತಾಲೂಕ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿರಂತರವಾದ ಶ್ರಮ ಶಿಸ್ತು ಸಮಯ ಪಾಲನೆಯಿಂದ ಎತ್ತರದ ಗುರಿ ಸಾಧಿಸಲು ಸಾಧ್ಯ ಎನ್ನುವದಕ್ಕೆ ರುದ್ರಪ್ಪ ಹುರುಳಿ ಅವರ ಬದುಕು ಸಾಧನೆಗೆ ಜೀವಂತ ಸಾಕ್ಷಿಯಾಗಿದೆ.

ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿ ಬದುಕು ಆರಂಭಿಸಿದ ಅವರು ಮುರಾರ್ಜಿ ಇಂದಿರಾ ವಸತಿ ಶಾಲೆಗಳಂತ ಇತರ ಶಾಲೆಗಳಲ್ಲಿ ಪ್ರಿನ್ಸಿಪಾಲರಾಗಿ ಅನೇಕ ಒತ್ತಡಗಳ ನಡುವೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ತಯಾರು ಮಾಡುವಲ್ಲಿ ಯಶಸ್ವಿಯಾಗಿ ಸಮಾಜಕ್ಕೆ ನೀಡಿದ ಕೀರ್ತಿ ರುದ್ರಪ್ಪ ಹುರುಳಿ ಅವರಿಗೆ ಸಲ್ಲುತ್ತದೆ.
ಅವರ ಮೃದು ಮಾತು ಸದಾ ಹಸನ್ಮುಖಿ ಸಮಾಧಾನ ಸ್ವಭಾವವೇ ರಾಜ್ಯ ವ್ಯಾಪಿ ಅನೇಕ ಸಮಿತ್ರರನ್ನು ಸಂಪಾದಿಸಲು ಕಾರಣವಾಗಿದೆ.

ಅವರ ನಿವೃತ್ತಿ ಬದುಕು ಆರೋಗ್ಯ ಸಮೃದ್ಧಿಯಿಂದ ಕೂಡಿರಲಿ ಎಂದು ಹಾರೈಸಿದರು.

ಸೇವಾ ನಿವೃತ್ತಿ ಹೊಂದಿದ ರುದ್ರಪ್ಪ ಹುರುಳಿ ದಂಪತಿಯನ್ನು ತಾಲೂಕ ಆಡಳಿತ ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಅನೇಕರು ಸನ್ಮಾನಿಸಿದರು ಈ ವೇಳೆ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ತಾಲೂಕ ಘಟಕದ ಅಧ್ಯಕ್ಷ ಎಸ್. ಜಿ. ದಾನಪ್ಪಗೌಡರ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೖ. ಡಿ. ಗಾಣಿಗೇರ. ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ದಾನರಡ್ಡಿ.
ಬಿ ಆರ್ ಸಿ ಎಂ. ಎ. ಫಣಿಬಂದ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆರ್. ಎಲ್. ನಾಯಕರ.
ಮಹೇಶ್ ಕುರಿ. ಬಿ.ಎಂ. ಖ್ಯಾತನಗೌಡರ. ಹಾಲನಗೌಡ ಪಾಟೀಲ. ಸೇರಿದಂತೆ ಇತರರು ಇದ್ದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ